ಮಂಗಳವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಬಿಡಿ ಬ್ರೋಕರ್ ಮೋಹನ್
ಎಂಬವರಮನೆಯಲ್ಲಿ 5 ಕೆಜಿ ಚಿನ್ನ, ಬೆಳ್ಳಿ ತಟ್ಟೆ, ಲೋಟ, ದೀಪದ ಕಂಬಗಳು ಪತ್ತೆಯಾಗಿದೆ.
ಈಗಲೂ ಶೋಧನಾ ಕಾರ್ಯ ಮುಂದುವರಿದಿದೆ, ಇದರೊಂದಿಗೆ ಅಧಿಕಾರಿಗಳು ಚಿನ್ನ – ಬೆಳ್ಳಿ ಖರೀದಿಸಿದ ಮೂಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸರ್ಕಾರದಿಂದ ಯಾವುದೇ ಯೋಜನೆ ಪಡೆಯಬೇಕೆಂದರೂ ಮಧ್ಯವರ್ತಿಗಳ ಮೂಲಕವೇ ಹೋಗಬೇಕಿದೆ.
ತಾನು ಯೋಜನೆಯ ಪ್ರಯೋಜನ ಪಡೆಯಬೇಕಾದರೆ, ಇಷ್ಟು ಕಮಿಷನ್ ಕೊಡಬೇಕು ಎಂದು ಮಧ್ಯವರ್ತಿಯೇ ನಿಗದಿ ಮಾಡುತ್ತಾರೆ. ಒಮ್ಮೆ ಅವರು ಕಮಿಷನ್ ಪಡೆದು ಒಪ್ಪಿಗೆ ಕೊಟ್ಟರೆ, ಅಲ್ಲಿಗೆ ಆ ಕೆಲಸ ಮುಗಿಯಿತು ಎಂದೇ ಅರ್ಥ.
ಈ ರೀತಿಯಲ್ಲಿ ಕಮಿಷನ್ ಪಡೆಯುತ್ತಿರುವ ಮಧ್ಯವರ್ತಿಗಳು ಅಧಿಕಾರಿಗಳ ಸರಿಸಮನಾಗಿ ಆಸ್ತಿ ಮಾಡುತ್ತಿರುವುದು ಆಗಾಗ್ಗೆ ಬೆಳಕಿಗೆ ಬರುತ್ತಿದೆ.
ಮಂಗಳವಾರ ಬಿಡಿಎ ಕಚೇರಿಯ ಮಧ್ಯವರ್ತಿ ಮೋಹನ್ ಎಂಬವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳು ಪತ್ತೆಯಾಗಿರುವುದನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ.
ಬಿಡಿಎ ಅಧ್ಯಕ್ಷ ವಿಶ್ವನಾಥ್ ಸರ್ಕಾರಿ ಯೋಜನೆ ದಾಖಲೆಗಳೆಲ್ಲವೂ ಮಧ್ಯವರ್ತಿಗಳ ಮನೆಯಲ್ಲಿವೆ ಎಂದು, ಖುದ್ದು ಮೋಹನ್ ವಿರುದ್ಧ ಆರೋಪ ಮಾಡಿದ್ದರು.
ಈ ಸಂಬಂಧ ವಿಶ್ವನಾಥ್ ಹಾಗೂ ಹಿಂದಿನ ಬಿಡಿಎ ಆಯುಕ್ತ ಮಹದೇವ್ ಹಾಗೂ ಬ್ರೋಕರ್ ಮೋಹನ್ ಮಧ್ಯೆ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು. ಆದರೂ ಬಿಡಿಎನಲ್ಲಿ ಗಟ್ಟಿ ನೆಲೆಯೂರಿದ್ದ ಮೋಹನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇತ್ತೀಚೆಗೆ ಅರ್ಕಾವತಿ ವಿಚಾರದಲ್ಲೂ ಮೋಹನ್ ಕೈಚಳಕ ಎಂಬ ಸಂಶಯ ಈಗಲೂ ಇದೆ
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೈಕ್ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ