February 23, 2026

Newsnap Kannada

The World at your finger tips!

rockline

ಅಂಬರೀಶ್ ಬಗ್ಗೆ ಮಾತನಾಡುವಾಗ ಪ್ರಜ್ಞೆ ಇರಲಿ: ಹೆಚ್‍ಡಿಕೆಗೆ ರಾಕ್‍ಲೈನ್ ವಾರ್ನಿಂಗ್

Spread the love

ರೆಬೆಲ್ ಸ್ಟಾರ್ ಅಂಬರೀಶ್ ಬಗ್ಗೆ ಮಾತನಾಡುವಾಗ ಪ್ರಜ್ಞೆ ಇರಲಿ. ಅವರು ಬದುಕಿದ್ದಾಗ ಮಾತಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರಿಗೆ ರಾಕ್ ಲೈನ್ ವೆಂಕಟೇಶ್ ವಾರ್ನಿಂಗ್ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ. ರಾಕ್ ಲೈನ್ ವೆಂಕಟೇಶ್, ಅಂಬರೀಶ್ ವಿಷಯ ಮಾತಾಡೋವಾಗ ಪ್ರಜ್ಞೆ ಇಟ್ಟುಕೊಂಡು ಮಾತನಾಡಿ. ಚಿತ್ರರಂಗ ನಿಮಗೇನು ಮೋಸ ಮಾಡಿದೆ. ಹೇಗೆ ಲಾಭ ಮಾಡಿಕೊಂಡಿದ್ದೀರಾ ಎಲ್ಲರಿಗೂ ಗೊತ್ತು. ಯಾಕೆ ಚಿತ್ರರಂಗಕ್ಕೆ ಬೈಯುತ್ತೀರಾ ಎಂದು ಪ್ರಶ್ನೆ ಮಾಡಿದರು.

ನೀವು ಸಿಎಂ ಆಗಿದ್ದಾಗ ಚಿತ್ರರಂಗಕ್ಕೆ ಏನ್ ಮಾಡಿದ್ದೀರಾ.? ಅಂಬರೀಶ್ ಮೇಲೆ ಯಾಕೆ ಇಷ್ಟು ಆಪಾದನೆ ಮಾಡ್ತಿದ್ದೀರಾ. ಅವರು ಬದುಕಿದ್ದಾಗ ಮಾತಾಡಬೇಕಿತ್ತು. ಅವರು ಹೋದ ಮೇಲೆ ಯಾಕೆ ಇಂತಹ ಹೇಳಿಕೆ ಕೊಡುತ್ತಿದ್ದೀರಾ? ಇದು ನಮಗೆ ಬೇಜಾರು ತರುವ ವಿಷಯವಾಗಿದೆ ಎಂದು ಕಿಡಿಕಾರಿದ್ದಾರೆ.

error: Content is protected !!