ನಾಳೆಯಿಂದ ಮೈಸೂರಿನಲ್ಲಿ ಬೆ. 6 ರಿಂದ 2 ಗಂಟೆಯವರೆಗೆ ವಸ್ತುಗಳ ಖರೀದಿಗೆ ಅವಕಾಶ : ಡಿಸಿ ಬಗಾದಿ‌

Team Newsnap
1 Min Read

ಕೊರೋನಾ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ, ಈಗ ಲಾಕ್ ಡೌನ್ ನಿರ್ಬಂಧಗಳನ್ನು ನಾಳೆಯಿಂದ ಸರ್ಕಾರ ಸಡಿಲಗೊಳಿಸಿ ಆದೇಶಿಸಿದೆ.

ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಜಿಲ್ಲಾಧಿಕಾರಿ ಬಗಾದಿ
ಅನ್ ಲಾಕ್ 3 ಕೆಟಗರಿಯಿಂದ ಮೈಸೂರು ಜಿಲ್ಲೆಯಲ್ಲಿ ಅನ್ ಲಾಕ್ ಕೆಟಗರಿ 2ಕ್ಕೆ ಸೇರ್ಪಡೆಗೊಳಿಸುವ ಮೂಲಕ, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತು ಖರೀದಿಗೆ ಸಮಯವನ್ನು ವಿಸ್ತರಣೆ ಮಾಡಿ ಆದೇಶಿಸಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಕಾರಣದಿಂದಾಗಿ, ಸರ್ಕಾರವು ಕೆಟಗರಿ 3 ರಿಂದ, ಕೆಟಗರಿ 2ಕ್ಕೆ ಸೇರ್ಪಡೆಗೊಳಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಮಿಕರೊಂದಿಗೆ ಕೈಗಾರಿಕೆ, ಉದ್ದಿಮೆಗಳನ್ನು ತೆರೆಯೋದಕ್ಕೆ, ಶೇ.30ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಅಗತ್ಯ ಮಾರಾಟಕ್ಕೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ

  • ಹಣ್ಣುಗಳು ದಿನಸಿ ಮಾಂಸ ಅಗತ್ಯ ವಸ್ತುಗಳ
  • ಪಾನಿಪಾರಿ ಬಜ್ಜಿ ತಳ್ಳು ಗಾಡಿಯಲ್ಲಿ ಮಾರುವವರಿಗೂ ಅವಕಾಶ
  • ಕಿರಾಣಿ ಅಂಗಡಿಗಳಿಗೆ ಅವಕಾಶ
  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ
  • ಎಲ್ಲಾ ವಸ್ತುಗಳು ಹೋಂ ಡೆಲಿವರಿಗೆ 24/7 ಅವಕಾಶ
  • ಹೋಟೆಲ್‌ಗಳಲ್ಲಿ 24/7 ಪಾರ್ಸೆಲ್‌ಗೆ ಅವಕಾಶ
  • ಕಟ್ಟಡದ ನಿರ್ಮಾಣ ಕಾಮಗಾರಿಯ ಮಾರಾಟ ಮಳಿಗೆಗೂ ಅವಕಾಶ.
  • ಕಬ್ಬಿಣದ ಅಂಗಡಿ, ಸಿಮೆಂಟ್, ಹಾರ್ಡ್‌ವೇರ್ ಸೇರಿ ಎಲ್ಲಾ ಕಟ್ಟಡ ಸಾಮಾಗ್ರಿಗಳ ಅಂಗಡಿಗಳಿಗೆ ಅವಕಾಶ
  • ಉದ್ಯಾನವನಗಳಲ್ಲಿ 05 ರಿಂದ 10 ರವರೆಗೂ ಅವಕಾಶ
  • ಟ್ಯಾಕ್ಸಿ ಆಟೋಗಳಿಗೆ ಇಬ್ಬರು ಪ್ಯಾಸೆಂಜರ್ ಜೊತೆ ಅವಕಾಶ
  • ಸರ್ಕಾರಿ ಕಚೇರಿಗಳು ಶೇಕಡ 50ರಷ್ಟು ಸಿಬ್ಬಂದಿಯೊಂದಿಗೆ ಅವಕಾಶ.
  • ತರಬೇತಿಗೆ ಅವಕಾಶ
  • ಕನ್ನಡಕದ ಅಂಗಡಿಗಳಿಗೂ ಅವಕಾಶ
  • ಅಂತ್ಯ ಸಂಸ್ಕಾರಕ್ಕೆ 5 ಜನರಿಗೆ ಭಾಗವಹಿಸಲು ಅವಕಾಶ
  • ಎಲ್ಲಾ ಕೈಗಾರಿಕೆಗಳು ಶೇಕಡ 50ರಷ್ಟು ಸಿಬ್ಬಂದಿಗೆ ಅವಕಾಶ
  • ಗಾರ್ಮೆಂಟ್ಸ್‌ಗೆ ಶೇಕಡ 30ರಷ್ಟು ಕಾರ್ಮಿಕರಿಗೆ ಅವಕಾಶ
Share This Article
Leave a comment