ಬೆಳಗಾವಿ ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡಲಾಗುವುದು
ಈ ವಿಷಯವನ್ನು ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಈ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಅನೇಕರಿಗೆ ಗಾಯ ಆಗಿರುವ ಬಗ್ಗೆ ಮಾಹಿತಿ ಬಂದಿದೆ.ಇದನ್ನು ಓದಿ –‘ಕೋಟಿಗೊಬ್ಬ–3’ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತ
ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗುತ್ತದೆ. ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಗಳು ಸಂಪೂರ್ಣ ವೆಚ್ಚ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಹಲವರಿಗೆ ಗಂಭೀರ ಗಾಯಗಳಾಗಿದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ