Karnataka

ಪುನರ್ಜನ್ಮದ ನಂಬಿಕೆ : ಇಬ್ಬರು ಹೆಣ್ಣು ಮಕ್ಕಳನ್ನು ಬಲಿಕೊಟ್ಟ ಪೋಷಕರು

ದೇವರು ಆಗ್ರಹ ಮಾಡಿದ್ದಾನೆ ಎಂದು ಇಬ್ಬರು ಹೆಣ್ಣು ಮಕ್ಕಳನ್ನು ಬಡಿದು ಕೊಂದ ಪೋಷಕರು, ಪುನರ್ಜನ್ಮ ಬರುತ್ತದೆ ಎಂಬ ಮೂಢ ನಂಬಿಕೆಯಿಂದ ಹೆತ್ತ ಮಕ್ಕಳನ್ನು ಬಲಿಕೊಟ್ಟ ಘಟನೆ ಆಂಧ್ರ ಪ್ರದೇಶದ ಮದನಪಲ್ಲಿಯಲ್ಲಿ ಜರುಗಿದೆ.

ಕಲಿಯುಗ ಅಂತ್ಯವಾಗಲಿದೆ. ಸತ್ಯಯುಗ ಆರಂಭವಾಗಲಿದೆ. ಈ ಸಂದರ್ಭದಲ್ಲಿ ನಿಮ್ಮ ಮಕ್ಕಳನ್ನು ಬಲಿಕೊಡುವುದರಿಂದ ಸತ್ಯ ಯುಗದಲ್ಲಿ ಪುನರ್ಜನ್ಮವಾಗುತ್ತದೆ ಎನ್ನುವ ದೈವ ಸಂದೇಶ ಬಂದಿದೆ ವಾಮಾಚಾರ ಮಾಡುವ ವ್ಯಕ್ತಿ ನಂಬಿ ಅತೀ ವಿದ್ಯಾವಂತರಾದ ಪೋಷಕರೆ
ಈ ಕೃತ್ಯಮಾಡಿದ್ದಾರೆ.

ಅಲೈಕ್ಯ (27) ಮತ್ತು ದಿವ್ಯ( 22) ಇಬ್ಬರು ಹೆಣ್ಣು ಮಕ್ಕಳನ್ನು ವಿದ್ಯಾವಂತ ದಂಪತಿ ಬಡಿದು ಕೊಂದಿದ್ದಾರೆ.

ಮದನಪಲ್ಲಿ ಪುರುಷೋತ್ತಮ ನಾಯ್ಡು ಮತ್ತು ಪದ್ಮಜಾ ಎಂಬುವವರು ಬಲಿ ತೆಗೆದುಕೊಂಡ ಈ ಪೋಷಕರು ಬೇರೆ ಬೇರೆ ಕಾಲೇಜುಗಳಲ್ಲಿ ಉಪ ಪ್ರಾಂಶುಪಾಲರಾಗಿದ್ದಾರೆ.

ಇಬ್ಬರಿಗೂ ಮೂಢನಂಬಿಕೆಯುಳ್ಳ ಪೋಷಕರು. ಅಲೈಕ್ಯ ಹಿರಿಯ ಮಗಳು ಸ್ನಾತಕೋತ್ತರ ಪದವೀಧರೆ, ಕಿರಿಯ ಮಗಳು ದಿವ್ಯ ಬಿಬಿಎ ಓದಿ ಸಂಗೀತಾಭ್ಯಾಸ ಮಾಡುತ್ತಿದ್ದಾರೆ.

ಕೊರೋನಾ ನಂತರ ಎಲ್ಲರೂ ಹೊರವಲಯದಲ್ಲಿರುವ ಅಪಾರ್ಟ್ ಮೆಂಟ್ ಮನೆಯಲ್ಲೇ ಇರುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಜೋರಾದ ಶಬ್ದ ಬಂದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಂದರೆ ದಂಪತಿ ಒಳ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಂತರ ಒತ್ತಾಯಪೂರ್ವಕವಾಗಿ ಪೊಲೀಸರು ಒಳಗೆ ಹೋಗಿ ನೋಡಿದಾಗ ಒಂದೊಂದು ಕೋಣೆಯಲ್ಲಿ ಒಬ್ಬೊಬ್ಬ ಮಕ್ಕಳನ್ನು ಬಡಿದು ಕೊಂದು, ಕೆಂಪು ಬಟ್ಟೆಯಲ್ಲಿ ಸುತ್ತಿಡಲಾಗಿದೆ. ಸುತ್ತಲೂ ಪೂಜಾ ಸಾಮಗ್ರಿ ಇಡಲಾಗಿತ್ತು.

ಇಬ್ಬರಿಗೂ ನಾಳೆ ಪುನರ್ಜನ್ಮವಾಗುತ್ತದೆ. ಹಾಗಾಗಿ ಶವವನ್ನು ಅಲ್ಲಿಂದ ತೆಗೆಯಬಾರದು ಎಂದು ದಂಪತಿ ಪಟ್ಟು ಹಿಡಿದಿದ್ದಾರೆ. ಆದರೂ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ದಂಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024