Karnataka

ಕರ್ನಾಟಕದಿಂದ ಅಯೋಧ್ಯೆ ರಾಮಮಂದಿರಕ್ಕೆ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ

ಬೆಂಗಳೂರು: ಅಯೋಧ್ಯೆಯ ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಯಾಗುತ್ತಿದ್ದು , ಬೆಂಗಳೂರಿನಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ದೇಗುಲಕ್ಕೆ ಅರ್ಪಿಸಲಾಗುತ್ತಿರುವ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳಿಗೆ ವಿವಿಧ ಮಠಾಧೀಶರ ಅಧ್ವರ್ಯದಲ್ಲಿ ಪೂಜೆ ನೇರವೇರಿಸಲಾಗಿದೆ .

ನಿನ್ನೆ ಬನಶಂಕರಿ ಒಂದನೇ ಹಂತದಲ್ಲಿರುವ ಬ್ರಹ್ಮ ಚೈತನ್ಯ ಮಂದಿರದಲ್ಲಿ ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗುತ್ತಿರುವ ಶ್ರೀರಾಮ ಮಂದಿರದ ದೇಗುಲಕ್ಕೆ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಅರ್ಪಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ರಾಮಮಂದಿರ ದೇವಸ್ಥಾನ ಸಹಸ್ರ ವರ್ಷಗಳವರೆಗೆ ಉಳಿಯಬೇಕಿದೆ.

ಈ ಹಿನ್ನೆಲೆಯಲ್ಲಿ ಘಂಟಾ ನಾದ ಪರಿಕ್ರಮ ಬೆಂಗಳೂರಿನಿಂದ ಹೊರಡುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದ್ಧಾರೆ.

38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳು ,5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳನ್ನು ಸಮರ್ಪಣೆ ಮಾಡಲಾಗಿದೆ. ಇಂದು ಅಯೋಧ್ಯೆಗೆ ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಕೊಂಡೊಯ್ಯಲಿದ್ದಾರೆ.

ಈ ಘಂಟೆಗಳನ್ನು ತಮಿಳುನಾಡಿನ ನಾಮಕ್ಕಲ್‌ನಲ್ಲಿ ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ.ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಾಮನಗರದ ಬಳಿ ದರೋಡೆ

ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024