ಬೇಸಿಗೆಯಲ್ಲಿ ದೇಹ ನಿಜರ್ಲೀಕರಣಗೊಳ್ಳದಂತೆ ಹೆಚ್ಚೆಚ್ಚು ನೀರು ಕುಡಿಯಬೇಕಾಗುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸೀಸನಲ್ ಹಣ್ಣು (Seasonal Fruits) ಗಳನ್ನು ತಿನ್ನಬೇಕಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹಸಿವಾದಾಗ ತಿನ್ನಲು ಅತ್ಯಂತ ಉಪಯೋಗಕಾರಿಯಾಗಿದೆ.
ಬೇಸಿಗೆಯಲ್ಲಿ ಡಿಹೈಡ್ರೇಶನ್ ಸಮಸ್ಯೆ ಕಾಡದಿರಲು ಕಲ್ಲಂಗಡಿ, ಮೂಸಂಬಿ, ಮಸ್ಕ್ಮೆಲನ್ ಮೊದಲಾದ ಹಣ್ಣುಗಳನ್ನು ತಿನ್ನುವಂತೆ ಶಿಫಾರಸು ಮಾಡಲಾಗುತ್ತದೆ. ಕರ್ಬೂಜ ಹಣ್ಣು ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ಗಳನ್ನು ಸಹ ಸಾಕಷ್ಟು ಪ್ರಮಾಣದಲ್ಲಿ ಹೊಂದಿರುತ್ತವೆ.
ಖರ್ಬೂಜ (Muskmelon) ಸೇವಿಸುವುದರಿಂದ ಉತ್ತಮ ಆರೋಗ್ಯದ ಲಾಭಗಳ ಜೊತೆಗೆ ನಿಮ್ಮ ತ್ವಚೆಯನ್ನು ಸಹ ಕಾಪಾಡುತ್ತದೆ. ಇದರಲ್ಲಿ ವಿಟಮಿನ್ ಎ ಸಹ ಲಭ್ಯವಿದ್ದು, ಅವು ತ್ವಚೆಯ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನುವಹಿಸುತ್ತವೆ.ನೀರಿನಂಶದ ಜೊತೆಗೆ ಕರ್ಬೂಜ ಹಣ್ಣು ತಂಪು ಮತ್ತು ಶಮನಕಾರಿ ಗುಣವನ್ನು ಹೊಂದಿದೆ. ಇದು ಎದೆ ಉರಿಯನ್ನು ಶಮನ ಮಾಡುತ್ತದೆ ಮತ್ತು ಮೂತ್ರಕೋಶಗಳಲ್ಲಿ ಇರುವ ಕಶ್ಮಲಗಳನ್ನು ಸ್ವಚ್ಛಗೊಳಿಸುತ್ತದೆ.
ಖರ್ಬೂಜ (Muskmelon) ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಕರ್ಬೂಜ ಹಣ್ಣು ಅಗ್ರಸ್ಥಾನ ಪಡೆಯುತ್ತದೆ.
ಬೆಲ್ಲವನ್ನು ಪುಡಿ ಮಾಡಿಕೊಳ್ಳಿ. ಒಣಶುಂಠಿಯನ್ನು ತುರಿದುಕೊಳ್ಳಿ. ಕಾಳು ಮೆಣಸನ್ನು ಸ್ವಲ್ಪ ತರಿಯಾಗಿ ದಪ್ಪವಾಗಿ ಕುಟ್ಟಿ,
ಪಾತ್ರೆಗೆ ನೀರು ಹಾಕಿ, ಅದಕ್ಕೆ ಕುಟ್ಟಿದ ಎಲ್ಲಾ ಸಾಮಾನುಗಳನ್ನು ಹಾಕಿ ಚೆನ್ನಾಗಿ ಕೈನಲ್ಲಿಯೇ ಕಿವುಚಿ. ಸಣ್ಣಗೆ ಹೆಚ್ಚಿದ ಕರಬೂಜ ಹಣ್ಣನ್ನು ಸಹ ಸೇರಿಸಿ. ಅದನ್ನು ಹಾಗೆಯೇ ನುಣ್ಣಗಾಗುವಂತೆ ಕೈನಲ್ಲಿಯೇ ಹಿಸುಕಿ. ಬೆಲ್ಲ ಕರಗಿದ ನಂತರ ಏಲಕ್ಕಿ ಪುಡಿ ಮತ್ತು ಉಪ್ಪು ಹಾಕಿ ಬೆರೆಸಿ. ಇದನ್ನು ತಣ್ಣಗೂ ಸೇವಿಸಬಹುದು. ಪಾನಕದಲ್ಲಿ ಹಣ್ಣಿನ ತೀರ ಚಿಕ್ಕದಾದ ತುಣುಕುಗಳು ಇರುತ್ತವೆ. ಅದು ಪಾನಕ ಕುಡಿಯುವಾಗ ಸಿಗುತ್ತದೆ. ಹಣ್ಣನ್ನು ಜೊತೆಯಲ್ಲಿ ತಿಂದರೆ ಅದು ಇನ್ನೂ ಚೆನ್ನಾಗಿರುತ್ತದೆ.
ನಿಮ್ಮ ಬೇಸಿಗೆಯನ್ನು ತಂಪು ಮಾಡಿಕೊಳ್ಳಲು ಇದನ್ನು ಓದಿ
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment