Main News

ಬೆಂಗಳೂರನಲ್ಲಿ ಡಿ 31 ರಾತ್ರಿ ಹೊಸ ವರ್ಷಾಚರಣೆಗೆ ಕಠಿಣ ಕಡಿವಾಣ

ಹೊಸ ವರ್ಷಾಚರಣೆಗೆ ಬ್ರೇಕ್​ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಜಾರಿಯ ಕ್ರಮವನ್ನು ಕೈ ಬಿಟ್ಟು ಈಗ ಕೇವಲ ಡಿ 31 ರಾತ್ರಿ ಸೆಕ್ಷನ್ 144 ಜಾರಿ ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಸುದ್ದಿಗೋಷ್ಠಿ ನಡೆಸಿ, ಹೊಸ ವರ್ಷದ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದರು.

  • 31ರ ರಾತ್ರಿ ಬೆಂಗಳೂರಲ್ಲಿ ಸೆಕ್ಷನ್​ 144 ಜಾರಿಯಲ್ಲಿರುತ್ತದೆ.
  • ಯಾರೊಬ್ಬರೂ ಸಾರ್ವಜನಿಕ ಪ್ರದೇಶದಲ್ಲಿ ಗುಂಪು ಸೇರುವಂತಿಲ್ಲ.
  • ಯಾವುದೇ ರಸ್ತೆಗಳ ಮೇಲೆ ಸೆಲೆಬ್ರೇಷನ್​ ಮಾಡಲು ಅವಕಾಶ ಇರುವುದಿಲ್ಲ. ಖಾಸಗಿ ಕ್ಲಬ್​ಗಳು, ಅಪಾರ್ಟ್ಮೆಂಟ್​ಗಳಲ್ಲಿ ನಿವಾಸಿಗಳು ಹೊಸ ವರ್ಷ ಆಚರಣೆ ಮಾಡಬಹುದು.
  • ಬ್ಯಾಂಡ್, ಮ್ಯೂಸಿಕ್ ಕಾರ್ಯಕ್ರಮ ಗಳನ್ನು ಆಯೋಜಿಸುವಂತಿಲ್ಲ.
  • ಹೊಸ ವರ್ಷಾಚರಣೆ ವೇಳೆ ಡಿಜೆ ವ್ಯವಸ್ಥೆಗೆ ಅವಕಾಶವಿಲ್ಲ
  • ರೆಸ್ಟೋರೆಂಟ್, ಪಬ್, ಕ್ಲಬ್​ಗಳಲ್ಲಿ ಕಡ್ಡಾಯವಾಗಿ ಕೊವಿಡ್​-19 ನಿಯಮಗಳನ್ನು ಪಾಲಿಸಬೇಕು.
  • ಗ್ರಾಹಕರಿಗೆ ಅಡ್ವಾನ್ಸ್ ಬುಕಿಂಗ್​ಗೆ ಅವಕಾಶ ನೀಡಬೇಕು. ಪಬ್​ ಹಾಗೂ ರೆಸ್ಟೋರೆಂಟ್​ಗಳಲ್ಲಿ ಶೇ.50ರಷ್ಟು ಗ್ರಾಹಕರು ಬರಲು ಮಾತ್ರ ಅವಕಾಶ ನೀಡಬೇಕು.
  • ಕೂಪನ್ ಪಡೆದ ಗ್ರಾಹಕರು ಮಾತ್ರ ಹೋಟೆಲ್​​ ಒಳಗೆ ಇರಬೇಕು. ಅವರು ರಸ್ತೆಗೆ ಬಂದು ಸೆಲಬ್ರೇಷನ್​ ಮಾಡಬಾರದು
  • ರಾತ್ರಿ ಕಚೇರಿಯಿಂದ ಮನೆಗೆ ತೆರಳುವವರಿದ್ದರೆ, ಆಸ್ಪತ್ರೆಗೆ ಹೋಗುವವರಿದ್ದರೆ ಇಲ್ಲವೆ ಇತರೆ ಯಾವುದೇ ಅಗತ್ಯ ಸೇವೆಗಾಗಿ ಸಂಚಾರ ನಡೆಸಬಹುದು
  • ರಾತ್ರಿ ಜಾಲಿ ರೈಡ್​ ಉದ್ದೇಶ ಇಟ್ಟುಕೊಂಡು ಸಂಚಾರ ನಡೆಸಿದರೆ
    ವಾಹನ ಜಪ್ತಿ ಲೈಸನ್ಸ್ ರದ್ದು ಮಾಡಲಾಗುವುದು.
  • ಬೆಂಗಳೂರು ನಗರಾದ್ಯಂತ ಡಿ 31 ರಂದು ರಾತ್ರಿ ಡ್ರಂಕ್ ಮತ್ತು ಡ್ರೈವ್ ತಪಾಸಣೆ ಮಾಡುತ್ತೇವೆ.
  • ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಕೆಲವರು ಫ್ಲೈಓವರ್​ಗಳ ಮೇಲೆ ವಾಹನ ನಿಲ್ಲಿಸಿ ಗಲಾಟೆ ಮಾಡುತ್ತಾರೆ. ಇದಕ್ಕೆ ಬ್ರೇಕ್​ಹಾಕುವ ಉದ್ದೇಶದಿಂದ ಡಿ.31ರಂದು ರಾತ್ರಿ 8 ಗಂಟೆಯಿಂದ ಫ್ಲೈಓವರ್​ಗಳು ಬಂದ್​ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ.
Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024