ಕರ್ನಾಟಕ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಒಂದೇ ದಿನ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಬಂಧನವಾಗಿದೆ
ಪಿಎಸ್ಐ ಅಕ್ರಮ ಕೇಸ್ನಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನವಾದರೆ , ಇತ್ತ ತನ್ನ ಮ್ಯಾನೇಜರ್ ಮೂಲಕ 5 ಲಕ್ಷ ಲಂಚ ಪಡೆದ ಆರೋಪದಡಿ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ACB ಪೋಲಿಸರು ಬಂಧಿಸಿದ್ದಾರೆ .ಇದನ್ನು ಓದಿ –PSI ಅಕ್ರಮ ನೇಮಕಾತಿ ಹಗರಣ : ADGP ಅಮೃತ್ ಪೌಲ್ ಬಂಧನ
ಡಿಸಿ ಮಂಜುನಾಥ್ ಮಹೇಶ್ ಮೂಲಕ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರ ಅಜಂ ಪಾಷ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಈ ಹಿಂದೆಯೇ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದರು. ಆಗ ಮಹೇಶ್ ದೂರುದಾರನಿಂದ 5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು.
ಅಮೃತ್ ಪೌಲ್ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿತ್ತು. ಹೀಗಾಗಿ ಇವರೊಂದಿಗೆ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಎಡಿಜಿಪಿ ಅಮೃತ್ ಪೌಲ್ ಕೂಡ ಈ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಇವರ ಅವಧಿಯಲ್ಲೇ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿತ್ತು.
ಮಂಜುನಾಥ್ ಬಗ್ಗೆ ಒಂದಷ್ಟು ಮಾಹಿತಿ :
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5 ಲಕ್ಷ ಪಡೆದ ಪ್ರಕರಣದಲ್ಲಿ ಬಂಧಿತರಾದ ಇವರು ಸದ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಎಂಡಿ ಆಗಿದ್ದಾರೆ.ಎಸಿಬಿ ಅಧಿಕಾರಿಗಳು ಮಂಜುನಾಥ್ರನ್ನು ಇಂದು ವಿಚಾರಣೆಗೆ ಕರೆದು ಸಾಕ್ಷ್ಯಾಧಾರ ಪಕ್ಕಾ ಆದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂಲತಃ ರಾಜ್ಯ ಲೆಕ್ಕ ಪತ್ರ ಇಲಾಖೆ ಹಿರಿಯ ಅಧಿಕಾರಿಯಾಗಿದ್ದ ಮಂಜುನಾಥ್ ಅವರು ನಾನ್ ಕೆಎಎಸ್ ವಿಭಾಗದಲ್ಲಿ ಐಎಎಸ್ ಪದೋನ್ನತಿ ಪಡೆದವರಾಗಿದ್ದಾರೆ.
ಚಿಕ್ಕಬಳ್ಳಾಪುರ ಸಿಇಒ ಆಗಿದ್ದರು ನಂತರ ಕೋಲಾರ ಡಿಸಿ ಆಗಿದ್ದರು. ಬಳಿಕ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದರು. ಕಳೆದ 1 ವರ್ಷದಿಂದ ಬೆಂಗಳೂರು ಡಿಸಿಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು