ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಬೆಂಗಳೂರಿನ ಆರ್ ಅರ್ ನಗರ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.
ಆರ್ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಇದನ್ನು ಓದಿ –ಹಿರಿಯ ಕಾಂಗ್ರೆಸ್ಸಿಗ, ಮಾಜಿ MLC ಎಂ ಡಿ ರಮೇಶ್ ರಾಜು ನಿಧನ
ಸೋಮವಾರ ಶಾಲೆಯ ಇ-ಮೇಲ್ ಚೆಕ್ ಮಾಡಿದ ವೇಳೆ ಬೆದರಿಕೆ ಪತ್ರ ಬಂದಿರುವುದು ಪತ್ತೆಯಾಗಿದೆ.
ಬೆದರಿಕೆ ಪತ್ರ ಪತ್ತೆಯಾಗುತ್ತಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ; ಯಾರು ಭಯಪಡಬೇಡಿ- ಡಿಕೆಶಿ ಪುತ್ರಿ ಐಶ್ವರ್ಯಾ
ಡಿಕೆಶಿ ಪುತ್ರಿ ಐಶ್ವರ್ಯಾ ಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಹೇಳುತ್ತಿದ್ದಾರೆ. ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಒಂದು ಅರ್ಧ ಗಂಟೆ ಟೈಮ್ ಕೊಡಿ. ಎಲ್ಲವೂ ಸರಿ ಹೋಗುತ್ತೆ.ಯಾರೂ ಭಯ ಪಡೋ ಅವಶ್ಯಕತೆ ಇಲ್ಲ ಎಂದಿದ್ದಾರೆ.ನೀವು ಈ ರೀತಿ ಭಯ ಪಡ್ತಿರೋದ್ರಿಂದ ಮ್ಯಾನೇಜ್ಮೆಂಟ್ ಗೆ ಕಷ್ಟ ಆಗ್ತಿದೆ. ಕಂಟ್ರೋಲ್ ಮಾಡೋಕೆ ನಾವೂ ಎಲ್ಲ ಪ್ರಯತ್ನ ಮಾಡ್ತಿದೀವಿ ಎಂದು ಹೇಳಿದ್ದಾರೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ