ರಾಜ್ಯ ರಾಜಧಾನಿ ಬೆಂಗಳೂರಿನ ಯುವಕರು ಸಾಲು ಸಾಲಾಗಿ ಸಿರಿಯಾದ ಉಗ್ರ ಸಂಘಟನೆಯಾದ ಹಿಜ್ಬುಲ್ ತೆಹ್ರಿರ್ ಸಂಘಟನೆಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಎನ್ಐಎ ತನಿಖೆಯಿಂದ ಬಯಲು ಮಾಡಿದೆ.
ಎನ್ಐಎ ಇತ್ತೀಚೆಗೆ ಬೆಂಗಳೂರಲ್ಲಿ ಹಿಜ್ಬುತ್ ತೆಹ್ರಿರ್ ಉಗ್ರರನ್ನು ಬಂಧಿಸಿತ್ತು. ಈ ಪ್ರಕರಣದ ತನಿಖೆಯ ಬೆನ್ನುಹತ್ತಿದ ಅಧಿಕಾರಿಗಳು ಇದೀಗ ಅನೇಕ ಸ್ಫೋಟಕ ಮಾಹಿತಿಗಳನ್ನು ಹೊರಗೆಡಹುತ್ತಿದ್ದಾರೆ.
ಎನ್ಐಎ ತನಿಖೆಯಂತೆ 2013-14 ರಲ್ಲಿ ಬೆಂಗಳೂರಿನಿಂದ 5 ಯುವಕರು ಸಿರಿಯಾಗೆ ತೆರಳಿದ್ದಾರೆ. ಈ 5 ಯುವಕರನ್ನು ನಗರದ ಇರ್ಫಾನ್ ನಾಸೀರ್ ಮತ್ತು ಅಬ್ದುಲ್ ಅಹ್ಮದ್ ಖಾದರ್ ಎಂಬವರೇ ಸಿರಿಯಾಗೆ ಕಳುಹಿಸಿದ್ದಾರೆ ಎಂಬ ಅಂಶವೂ ಇದೀಗ ಬಹಿರಂಗವಾಗಿದೆ.
ಇರ್ಫಾನ್ ನಾಸೀರ್ ಹಾಗೂ ಅಬ್ದುಲ್ ಆಹ್ಮದ್ ಖಾದರ್ ನಿಷೇಧಿತ ಹಿಜ್ಬುತ್ ತೆಹ್ರಿರ್ ಸಂಘಟನೆ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಶಂಕಿತ ಉಗ್ರ ವೈದ್ಯ ಅಬ್ದುರ್ ರೆಹಮಾನ್ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದರು. ಖುರಾನ್ ಸರ್ಕಲ್ ಎಂದು ಮಾಡಿಕೊಂಡು ಬೆಂಗಳೂರಿನಿಂದ ಸಿರಿಯಾಗೆ ಕಳುಹಿಸಿ ಐಸಿಸ್ ಪರ ಕೆಲಸ ಮಾಡಲು ಯುವಕರನ್ನು ಈ ಆರೋಪಿಗಳು ಪ್ರಚೋದಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈಗಾಗಲೇ ಇಬ್ಬರು ಯುವಕರು ಸಿರಿಯಾದಲ್ಲಿ ಹತ್ಯೆಯಾಗಿರುವುದು ಪತ್ತೆ ಹಚ್ಚಿರುವ ಎನ್ಐಎ ಸಿರಿಯಾದಿಂದ ಮತ್ತೆ ಭಾರತಕ್ಕೆ ಬಂದಿದ್ದ ಓರ್ವನನ್ನೂ ಸಹ ಬಂಧಿಸಿದೆ. ಆದರೆ ಇದುವರೆಗೂ ಉಳಿದ ಇಬ್ಬರು ಇನ್ನೂ ಎಲ್ಲಿದ್ದಾರೆ ಎನ್ನುವುದು ಪತ್ತೆಯಾಗಿಲ್ಲ. ಅಲ್ಲದೆ 2014 ರ ನಂತರ ಇನ್ನೂ ಎಷ್ಟು ಮಂದಿಯನ್ನ ಸಿರಿಯಾಗೆ ಕಳುಹಿಸಿದ್ದಾರೆ ಎಂಬುದು ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment