January 29, 2026

Newsnap Kannada

The World at your finger tips!

todays protest

ಕರ್ನಾಟಕ ರಾಜ್ಯಕ್ಕೆ ದ್ರೋಹ – ಈ ಪ್ರತಿಭಟನೆ ದೇಶದ ಗಮನ ಸೆಳೆಯಲು : CM Siddaramaiah

Spread the love

ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಎಂ ಸಿದ್ದರಾಮಯ್ಯ (CM Siddaramaiah) , ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ,ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ ಎಂದು ಹೇಳಿದರು.

ತೆರಿಗೆ ಇಳಿಕೆ ಆದ ಮೇಲೆ ನಮಗೆ 62,098 ಕೋಟಿ ರೂ. ಕಡಿಮೆಯಾಗಿದೆ. ಬಿಜೆಪಿಯಿಂದ ನಮಗೆ ಅನ್ಯಾಯ, ಕರ್ನಾಟಕದ ಜನರಿಗೆ ದ್ರೋಹ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ (Nirmala Sitharaman) ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮಾತನಾಡಿ , ರ್ನಾಟಕಕ್ಕೆ ಇಷ್ಟು ಮೋಸ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9 ಕೆಜಿಗೂ ಹೆಚ್ಚು ಚಿನ್ನ ವಶಕ್ಕೆ

ನಮಗಾಗಿರುವ ಅನ್ಯಾಯವನ್ನು ಕೂಗಿ ಹೇಳಲು ಪ್ರತಿಭಟನೆ ಮಾಡುದ್ದೇವೆ ಎಂದು ಹೇಳಿದರು.

error: Content is protected !!