Main News

ಬೆಟ್ಟಿಂಗ್ ನಲ್ಲಿ ಹಣ ಗೋವಿಂದ ! ಯುವಕರು ಸರಗಳ್ಳತನಕ್ಕೆ ಇಳಿದರು

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಒಳಗಾಗಿ ಹಣ ಕಳೆದುಕೊಂಡ ಓರ್ವ ಯುವಕ ಮತ್ತು ಮೂವರು ಅಪ್ರಾಪ್ತರ ಹುಡುಗರ ಗುಂಪು ಒಂಟಿ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಲೂಟಿ ಮಾಡುತ್ತಿದ್ದವರನ್ನು ಪೋಲೀಸರು ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದ ನಿತೀಶ್ ಅಲಿಯಾಸ್ ಒಂಟೆ (19) ಹಾಗೂ ಅಪ್ರಾಪ್ತ ಯುವಕರಾದ ಚಂದನ್ , ಹರ್ಷಿತ್ ಗೌಡ ಹಾಗೂ ಶೇಷಾದ್ರಿ ಬಂಧಿತರಿಂದ 7.70 ಲಕ್ಷ ರೂಪಾಯಿ ಮೌಲ್ಯದ 118 ಗ್ರಾಂ ಮಾಂಗಲ್ಯ ಸರ , ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ ಹಾಗೂ ಮೊಬೈಲ್ ಗಳನ್ನು ಆರೋಪಿಗಳಿಂದ ವಶ ಪಡಿಸಿಕೊಳ್ಳಲಾಗಿದೆ.

ಮದ್ದೂರು ಪಟ್ಟಣದ ಶ್ರೀ ನರಸಿಂಹ ಸ್ವಾಮಿ ದೇವಾಲಯ ರಸ್ತೆ , ಲೀಲಾವತಿ ಬಡಾವಣೆ ತಾಲ್ಲೂಕಿನ ಮಾರಸಿಂಗನಹಳ್ಳಿ , ಅಜ್ಜಹಳ್ಳಿ ಗ್ರಾಮಗಳಲ್ಲಿ ಹಾಡು ಹಗಲೇ ಮತ್ತು ರಾತ್ರಿ ವೇಳೆ ರಸ್ತೆಗಳಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಕತ್ತಿನಲ್ಲಿದ್ದ ಮಾಂಗಲ್ಯ ಸರಗಳನ್ನು ಆರೋಪಿಗಳು ಬೈಕಿನಲ್ಲಿ ಬಂದು ಲೂಟಿ ಮಾಡಿ ಪರಾರಿಯಾಗಿದ್ದರು.

ಕಳೆದ ನವೆಂಬರ್ 4 ರಂದು ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಮೊಟ್ಟೆ ಖರೀದಿಸಲು ಬಂದಿದ್ದ ಸುಧಾ ಎಂಬ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದ್ದ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ.ಜೆ.ಪೃಥ್ವಿ ಮತ್ತು ಸಿಪಿಐ ಕೆ.ಆರ್.ಪ್ರಸಾದ್ ನೇತೃತ್ವದಲ್ಲಿ ಸರಗಳ್ಳರ ಪತ್ತೆಗೆ ಮದ್ದೂರು ಠಾಣೆ ಅಪರಾಧ ವಿಭಾಗದಿಂದ ವಿಶೇಷ ತಂಡ ರಚನೆ ಮಾಡಲಾಗಿತ್ತು

ನಿತೀಶ್ ಅಲಿಯಾಸ್ ಒಂಟೆ ಹಾಗೂ ಅಪ್ರಾಪ್ತ ವಯಸ್ಸಿನ ಮೂವರು ಆರೋಪಿಗಳನ್ನು ತಾಲ್ಲೂಕಿನ ನಿಡಘಟ್ಟ ಸಂತೆ ಮೈದಾನ ಹಾಗೂ ಚಾಮನಹಳ್ಳಿಯಲ್ಲಿ ನವೆಂಬರ್ 12ರಂದು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಇಡೀ ಸರಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಗೂ ಮೋಜು ಮಸ್ತಿ ಜೀವನ ನಡೆಸಲು ಇಂತಹ ಕೃತ್ಯದಲ್ಲಿ ತೊಡಗಿದ್ದರು ಎಂದು ಗೊತ್ತಾಗಿದೆ.
ಬಂಧಿತರನ್ನು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024