ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಬೆಂಗಳೂರಿನಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು..
ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದೆ. ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ.
ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಹಂತದಲ್ಲಿ ಇದೆ. ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು..
ಈ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ 2362.62 ಕೋಟಿ ರೂ. ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ.
ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಲಕ್ಷ್ಮಣ ರಾವ್ ಪೇಶ್ವೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment