Karnataka

ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಸಚಿವ ಎಂ .ಬಿ .ಪಾಟೀಲ ಹೆಜ್ಜೆ

*ಸ್ಥಳೀಯ ಶಾಸಕರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

*ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ‌ ನಡೆಸಿದ ನಂತರ ಖಾಸಗೀಕರಣದ ಬಗ್ಗೆ ತೀರ್ಮಾನ

ಬೆಂಗಳೂರು:

ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದ ಈಗ ಬೀಗಮುದ್ರೆ ಹಾಕಲಾದ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ.

ಈ ಸಂಬಂಧ ಸಚಿವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ ಅವರು, ಕಾರ್ಖಾನೆ ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನು ಎಂಬುದರ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ‌ ನಡೆಸಲು‌ ಸಚಿವರು‌ ಸೂಚಿಸಿದರು.

ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರನ್ನೂ ಕರೆಯಲು ಸಚಿವರು ಸೂಚಿಸಿದರು.

ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಟ್ಟಿದೆ ಎಂದು ಅವರು ತಿಳಿಸಿದರು.

ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ‌ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಎಂಪಿಎಂ ವ್ಯಾಪ್ತಿಯಲ್ಲಿ ಸುಮಾರು 23 ಸಾವಿರ ಹೆಕ್ಟೇರ್ ಅರಣ್ಯ ಮತ್ತು ಅರಣ್ಯೇತರ ಭೂಮಿ ಇದ್ದು ಇಲ್ಲಿ ಸದ್ಯಕ್ಕೆ ಅಕೇಶಿಯಾ, ನೀಲಗಿರಿ ಮತ್ತು ಬಿದಿರನ್ನು ಬೆಳೆಯಲಾಗುತ್ತಿದೆ. ಒಂದು ವೇಳೆ ಕಾರ್ಖಾನೆಯನ್ನು ಗುತ್ತಿಗೆ ‌ನೀಡಿದರೂ, ಕಾರ್ಖಾನೆ ಜಾಗದಲ್ಲಿ‌, ನಿಷೇಧಿಸಿರುವ ನೀಲಿಗಿರಿ ಬೆಳೆಯಲು ಅವಕಾಶ‌ ನೀಡಬಹುದೇ ಎಂಬುದನ್ನೂ ಕೂಲಂಕಶವಾಗಿ ಪರಿಶೀಲಿಸಬೇಕು ಎಂದು ಅವರು ವಿವರಿಸಿದರು.

ಇದಲ್ಲದೆ MPMನ ಕೆಲವು ಉದ್ಯೋಗಿಗಳಿಗೆ ಸರ್ಕಾರದ ವಿವಿಧ ಸಂಸ್ಥೆ/ನಿಗಮಗಳಲ್ಲಿ ನೌಕರಿ ಕೊಡಿಸುವ ಕೆಲಸವೂ ಆಗುತ್ತಿದೆ. ಕೆಲವರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ಜತೆಗೆ ತಾತ್ಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ 250 ಫಾರೆಸ್ಟ್ ವಾಚರ್ ಗಳ ವೇತನ ಏರಿಕೆಗೂ ಒಂದು ಪರಿಹಾರ ರೂಪಿಸಬೇಕು ಎಂದು ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಸೆಲ್ವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಎಂಪಿಎಂ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಎಪಿಸಿಸಿಎಫ್ ವನಶ್ರೀ ವಿಪಿನ್ ಸಿಂಗ್, ಚೀಫ್ ಆಪರೇಟಿಂಗ್ ಆಫೀಸರ್ ರವೀಂದ್ರನಾಥ್ ಮುಂತಾದವರು ಭಾಗವಹಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024