Main News

ಮೂವರಿಗೆ ಮಾತ್ರ ಮಂತ್ರಿ ಭಾಗ್ಯ – ಉಳಿದ ವಲಸಿಗರಿಗೆ‌ ಕೊಕ್ :ಆರ್ ಎಸ್ ಎಸ್ ಕಠಿಣ ನಿರ್ಧಾರ

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದ್ದ 17 ಮಂದಿ ಬಾಂಬೆ ಸಹೋದರರು ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೂವರನ್ನು ಹೊರತು ಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನದಿಂದ ಕೊಕ್ ನೀಡುವ ನಿರ್ಧಾರವನ್ನು ಆರ್‌ಎಸ್ ಎಸ್ ಬೈಠಕ್ ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದ ಶಾಸಕರ ಕಾರ್ಯವೈಖರಿ ಆರ್‌ಎಸ್‌ಎಸ್‌ ನಾಯಕರಿಗೆ ಸಮಾಧಾನ ತಂದಿಲ್ಲ ಎಂಬುದು ಒಟ್ಟಾರೆ ಅಭಿಪ್ರಾಯ.

ಬಾಂಬೆ ಬ್ರದರ್ಸ್‌ ಪಕ್ಷ ಸೇರುವ ಮೊದಲು ಹೇಳಿದ ಮಾತನ್ನು ತಪ್ಪಿದ್ದಾರೆ. ಅಧಿಕಾರವನ್ನು ಪಡೆದು ಎರಡು ವರ್ಷಗಳೇ ಕಳೆಯುತ್ತಾ ಬಂದರೂ ಕೂಡ ಡಾ.ಸುಧಾಕರ್‌, ಎಸ್.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌ ಅವರನ್ನು ಹೊರತು ಪಡಿಸಿ ಉಳಿದ ಯಾವುದೇ ವಲಸೆ ಶಾಸಕರು ಕೂಡ ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾಗಿಲ್ಲ. ಅಲ್ಲದೇ ಅವರ ಕಾರ್ಯವೈಖರಿಯಿಂದ ಪಕ್ಷಕ್ಕೆ ಲಾಭವಾಗಿಲ್ಲ. ಹೀಗಾಗಿ ಈ ಮೂವರನ್ನು ಹೊರತು ಪಡಿಸಿ ಉಳಿದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ನೀಡಬೇಡಿ. ಬದಲಾಗಿ ನಿಗಮ ಮಂಡಳಿ ಸ್ಥಾನವನ್ನು ನೀಡಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟದಲ್ಲಿ ಬಿಜೆಪಿಯ ಹಿರಿಯ ಶಾಸಕರಾದ ಆರ್.ಅಶೋಕ್‌, ಕಾರಜೋಳ, ಅಶ್ವಥ್‌ ನಾರಾಯಣ, ಅರವಿಂದ ಬೆಲ್ಲದ್‌ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಉಳಿದವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ.

ಆರ್‌ಎಸ್‌ಎಸ್‌ ಮುನಿಸು ಹಲವು ಹಾಲಿ ಸಚಿವರಿಗೆ ಮುಂದಿನ ಸಂಪುಟದಲ್ಲಿ ಕೋಕ್‌ ಸಿಗೋದು ಖಚಿತ.

Newsnap Team
Leave a Comment
Share
Published by
Newsnap Team

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024