ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಲ್ಐಸಿ ಸಹಯೋಗದೊಂದಿಗೆ ಜಾರಿಗೆ ತಂದಿದ್ದ ‘ಭಾಗ್ಯಲಕ್ಷ್ಮಿ ಯೋಜನೆ’ಯನ್ನು ಅಂಚೆ ಇಲಾಖೆಯ ‘ಸುಕನ್ಯಾ ಸಮೃದ್ಧಿ ಯೋಜನೆ’ಗೆ ಹಸ್ತಾಂತರಿಸಲು ಮುಂದಾಗಿದ್ದಾರೆ.
ಈ ಯೋಜನೆಯನ್ನು ಮರುವಿನ್ಯಾಸಗೊಳಿಸಿ ಅಂಚೆ ಇಲಾಖೆಯ ‘ಸುಕನ್ಯಾ ಸಮೃದ್ಧಿ ಯೋಜನೆ’ ಗೆ 2020-21 ನೇ ಸಾಲಿನಲ್ಲಿ ಮುಂದುವರಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರಿಂದ ಅನುಮೋದನೆಯನ್ನೂ ಪಡೆದಿದ್ದಾರೆ.
ಭಾಗ್ಯಲಕ್ಷ್ಮಿ ಯೋಜನೆಯು ಬಡ ಕುಟುಂಬಗಳಲ್ಲಿ ಜನಿಸಿದ ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದಾಗ 1 ಲಕ್ಷ ರೂಪಾಯಿಗಳನ್ನು ನೀಡುವ ಯೋಜನೆಯಾಗಿದೆ. ಬಿಪಿಎಲ್ ಕುಟುಂಬದಲ್ಲಿಜನಿಸಿದ ಹೆಣ್ಣುಮಕ್ಕಳಿಗೆ ಬಾಂಡ್ ನೀಡುವ ಯೋಜನೆಯೂ ಇದಾಗಿದೆ. ಯಡಿಯೂರಪ್ಪನವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಆಗ ಎಲ್ಐಸಿ ಈ ಯೋಜನೆಯ ಏಜೆನ್ಸಿಯಾಗಿತ್ತು.
ಈಗ ಯಡಿಯೂರಪ್ಪನವರ ಅಧ್ಯಕ್ಷತೆಯ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಯೋಜನೆಯ ಏಜೆನ್ಸಿಯನ್ನು ಎಲ್ಐಸಿಯಿಂದ ಅಂಚೆ ಕಛೇರಿಗೆ ಬದಲಿಸುತ್ತಿದೆ. ಕಾರಣ, ಭಾಗ್ಯಲಕ್ಷ್ಮಿ ಯೋಜನೆಯಡಿಯ ಫಲಾನುಭವಿಗಳ ಬಾಂಡ್ ಅವಧಿಯ ಬಳಿಕ ಫಲಾನುಭವಿಗಳಿಗೆ ಕೊಡಬೇಕಾದ ಮೊತ್ತವನ್ನು ಕೊಡಲು ತಕರಾರು ಮಾಡುತ್ತಲೇ ಇತ್ತು. ಅಲ್ಲದೇ ಬಡ್ಡಿಯ ದರ ಕಡಿಮೆ ಬೀಳುವದರಿಂದ, ಕೊರತೆಯ ಮೊತ್ತವನ್ನು ಸರ್ಕಾರವೇ ಭರಿಸಬೇಕೆಂದು ಆಗ್ರಹಿಸುತ್ತಿತ್ತು. ಹಾಗಾಗಿ ‘ಭಾಗ್ಯಲಕ್ಷ್ಮಿ ಯೋಜನೆ’ಯನ್ನು ಅಂಚೆ ಕಛೇರಿಯ ‘ಸುಕನ್ಯಾ ಸಮೃದ್ಧಿ ಯೋಜನೆ’ಗೆ ಹಸ್ತಾಂತರ ಮಾಡಲಾಗುತ್ತಿದೆ.
ಅಂಚೆ ಕಛೇರಿಗೆ ಯೋಜನೆಯನ್ನು ವರ್ಗ ಮಾಡಿರುವುದರಿಂದ ಫಲಾನುಭವಿಗಳಿಗೆ ಯಾವುದೇ ನಷ್ಟವಾಗುವದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment