ಪಾಂಡವಪುರದಿಂದ ಮತ್ತೆ ಭಾರತ್ ಜೋಡೋ ಯಾತ್ರೆ :ಸೋನಿಯಾಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕರು

Team Newsnap
1 Min Read
Bharat Jodo Yatra again from Pandavpura : Congress leaders supported Sonia ಪಾಂಡವಪುರದಿಂದ ಮತ್ತೆ ಭಾರತ್ ಜೋಡೋ ಯಾತ್ರೆ :ಸೋನಿಯಾಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕರು

ಎರಡು ದಿನ ದಸರಾ ( Dasara) ಹಬ್ಬದ ಬ್ರೇಕ್​ ಬಳಿಕ ಕಾಂಗ್ರೆಸ್​ನ ( Congress ) ಮುಖಂಡ ರಾಹುಲ್ ಗಾಂಧಿ ( Rahul Gandhi )ನಾಯಕತ್ವದಲ್ಲಿ ಹಮ್ಮಿಕೊಂಡಿರುವ ಭಾರತ​ ಐಕ್ಯತಾ ಯಾತ್ರೆಶುಕ್ರವಾರ ಬೆಳಿಗ್ಗೆಯಿಂದ ಮತ್ತೆ ಆರಂಭವಾಗಿದೆ.

ಆರಂಭದಲ್ಲೇ ಸೋನಿಯಾ ಗಾಂಧಿ ( Sonia Gandhi ) ಅವರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಇದು ಕಾಂಗ್ರೆಸ್​ನ ( Congress)ನಾಯಕರಿಗೆ ಮತ್ತಷ್ಟು ಜೋಷ್​ ನೀಡಿತ್ತು.ನಕಲಿ ಮದುವೆ ಸರ್ಟಿಪಿಕೇಟ್ ಸೃಷ್ಠಿಸಿ 19 ಕೋಟಿ ರು ಆಸ್ತಿ ಕಬಳಿಸಿದ ಸುಂದರಿ ! ಪೋಲಿಸರಿಂದ ಮೂವರ ಬಂಧನ 

ಮೇಲುಕೋಟೆ ( Melukote ) ವಿಧಾನಸಭಾ ಕ್ಷೇತ್ರದಲ್ಲಿ ಸಾಗುತ್ತಿರುವ ಯಾತ್ರೆಯಲ್ಲಿ ಜಕ್ಕನಹಳ್ಳಿಯಿಂದ ಸೋನಿಯಾ ಗಾಂಧಿ ಭಾಗಿಯಾಗಿದ್ದರು. ಹದಿನೈದು ನಿಮಿಷ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಸೋನಿಯಾ ಅವರು ರಾಜ್ಯ ನಾಯಕರ ಜೊತೆ ನಡೆಯುತ್ತಲೇ ಮಾತುಕತೆ ನಡೆಸಿದರು. ಇಂದು ಪಾಂಡವಪುರದಿಂದ ಶುರುವಾಗಿ ಬ್ರಹ್ಮದೇವರಹಳ್ಳಿಯವರೆಗೂ ಸಾಗಲಿದೆ.

ಈ ವೇಳೆ ರಾಹುಲ್​ಗೆ ಡಿ.ಕೆ. ಶಿವಕುಮಾರ್ ( D K Shivkumar ) ​​, ಸಿದ್ದರಾಮಯ್ಯ ( Siddaramaiah ) ಸೇರಿದಂತೆ ಹೆಚ್.ಕೆ ಪಾಟೀಲ್, ಜೈರಾಂ ರಮೇಶ್, ದಿಗ್ವಿಜಯ್ ಸಿಂಗ್ ಜೊತೆಯಾಗಿ ಪಾದಯಾತ್ರೆ ಮಾಡಿದರು.


ಎರಡು ದಿನದ ಹಿಂದೆ ರಾಜ್ಯಕ್ಕೆ ಬಂದಿರುವ ಸೋನಿಯಾ ಗಾಂಧಿ ಕಬಿನಿ ( Kabini ) ಹಿನ್ನೀರನಲ್ಲಿರುವ ಆರೆಂಜ್​ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದರು. ಪಾದಯಾತ್ರೆಯಲ್ಲಿ ಭಾಗಿ ಆಗಲು ರೆಸಾರ್ಟ್​​​ನಿಂದ ಹೊರಟು, ತೂಬಿನಕೆರೆವರೆಗೆ ಹೆಲಿಕಾಪ್ಟರ್​ ಮೂಲಕ ಆಗಮಿಸಿದರು. ಅಲ್ಲಿಂದ ಕಾರ್​ ಮೂಲಕ ಜಕ್ಕನಹಳ್ಳಿಗೆ ಹೋಗಿ ಯಾತ್ರೆಯಲ್ಲಿ ಭಾಗಿಯಾದರು.

ಪಾದಯಾತ್ರೆ ಮುಗಿಸಿದ ಸೋನಿಯಾ ಗಾಂಧಿ ಅವರು, ಸೀದಾ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.


ಇನ್ನೂ, 11 ಗಂಟೆಗೆ ಖಾರದ್ಯಕೆರೆ ಬಳಿ ನಾಯಕರು ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ 4 ಗಂಟೆಗೆ ಯಾತ್ರೆ ಮತ್ತೆ ಆರಂಭವಾಗಿ ಬ್ರಹ್ಮದೇವರಹಳ್ಳಿಯಲ್ಲಿ ಕೊನೆಗೊಳ್ಳಲಿದೆ. ಒಟ್ಟಾರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಪಾದಯಾತ್ರೆಗೆ, ಹೋದಲೆಲ್ಲ ಅಭೂತ ಪೂರ್ವ ಬೆಂಬಲ ಸಿಗುತ್ತಿದೆ.

Share This Article
Leave a comment