Categories: New DelhiTrending

ಬಿಜೆಪಿ ಭೀಷ್ಮ ಅಡ್ವಾನಿಗೆ ‘ಭಾರತ ರತ್ನ’

ನವದೆಹಲಿ : 96 ರ ವಯೋಮಾನದ , ಬಿಜೆಪಿ ಭೀಷ್ಮ ,ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಘೋಷಣೆ ಮಾಡಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ.

ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರಿಗೆ ಖುದ್ದಾಗಿ ಈ ವಿಷಯ ತಿಳಿಸಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

ಕಳೆದ ತಿಂಗಳು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡಿತು. ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ ಎಂದೇ ಜನಪ್ರಿಯರು ಅಡ್ವಾಣಿಯವರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು. ಅದಾದ ಒಂದೇ ವಾರದಲ್ಲಿ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಘೋಷಣೆಯಾಗಿದೆ. 

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2002 ರಿಂದ 2004 ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಸಚಿವರಾಗಿದ್ದರು.ಶೀಘ್ರವೆ ನಮ್ಮ ಮೆಟ್ರೋ ಗೆ ಬರಲಿದೆ ಹೊಸ QR ಕೋಡ್ ಆ್ಯಪ್‌

1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು ಕೆ ಅಡ್ವಾಣಿ ಅವರು 1980 ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಾರಂಭದಿಂದಲೂ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ 90 ರ ದಶಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದರ ಬೆಳವಣಿಗೆಯನ್ನು ರೂಪಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.

Team Newsnap
Leave a Comment

Recent Posts

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024