
ಅಧ್ಯಾಪಕಿ,ಕವಿಯತ್ರಿ
ಭರತನಾಳಿದ ಈ ನಾಡು ಭಾರತಾಂಬೆಯ ಮಡಿಲಾಯಿತು ನೋಡಿ ಅವಳ ಬಂಧನದ ಪರ್ವ ಮೊದಲಾಯಿತು
ಭೂಮಿ ವಸುಂಧರೆಯಾದಳು ನೋಡಿ
ಅವಳ ಬಂಗಾರದೊಡಲ ಬಗೆದು,
ಬರಿದು ಮಾಡಲಾಯಿತು
ಜನನಿ ಜನ್ಮ ಭೂಮಿ
ಸ್ವರ್ಗ ಸಮಾನವೆಂದರು ನೋಡಿ
ಗಡಿಯ ಗೆರೆಯೆಳೆದು ವೈಷಮ್ಯದ
ಬೆಂಕಿ ಹಚ್ಚಲಾಯಿತು
ಕಾಡು ಗಿಡಗಂಟೆಗಳ ನಡುವೆ
ಕೋಗಿಲೆಯ ಉಲಿ ಪಲ್ಲವಿಸುವುದನು
ವನದೇವತೆ ಎಂದರು ನೋಡಿ
ಹುಡುಕಿ ಹುಡುಕಿ ಬುಡಕ್ಕೆ ಕೊಡಲಿ ಹಾಕಿ
ಹಸಿರ ನೆತ್ತರ ಹರಿಸುವಂತಾಯಿತು
ಅದೆಲ್ಲೋ ಹಿಮರಾಶಿಯ ನೆತ್ತಿಯಲಿ
ಭೂಮ್ಯಾ0ತರಾಳದಲಿ ನರ್ತನಗೈಯುತ್ತಿದ್ದ
ಜಲರಾಶಿಗೆ ಗಂಗಾ ಮಾತೆ
ಪುಣ್ಯಪ್ರದಾತೆ ಎಂದರು ನೋಡಿ
ಶವವ ಎಸೆದೆಸೆದು ವಿಷವ ಬೆರಸಿ
ಪರಮ ಮಾಲಿನ್ಯಗೊಳಿಸಲಾಯಿತು
ಹೆಣ್ಣು ಕ್ಷಮಯಾಧರಿತ್ರಿ ಎಂದಾಗಲೇ
ಕಂಬನಿಯ ಕರಗಿಸಿ
ಎಗ್ಗಿಲ್ಲದ ನೋವ ಅವುಡುಗಚ್ಚಿ
ಬಚ್ಚಿಡುವಂತಾಯಿತು
ಇದೆಂತಹ ನಂಟು
ಹೆಣ್ಣಿಗೂ ನೋವಿಗೂ?
ಪುಣ್ಯದ ಎಳೆಎಳೆಗೂ
ಪ್ರೀತಿಯ ಕಣಕಣಕ್ಕೂ
ಅಭಿಮಾನದ ಹೊಳೆಹೊಳೆಗೂ
ಹೆಣ್ಣರೂಪ ನೀಡಿದರು ನೋಡಿ
ಅವಳಿಗೂ ನೋವಿಗೂ ಆಗಲೇ
ಅವಿನಾಭಾವ ನಂಟು ಸೃಷ್ಟಿಯಾಯಿತು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
- ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
More Stories
ನೇರ ನುಡಿ ಸಾಹಿತಿ ಡಿಎಸ್ ನಾಗಭೂಷಣ್ ನಿಧನ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ
ಕನ್ನಡ ಕವಿಕಣ್ಣಿನ ಯುಗಾದಿ