ಭರತನಾಳಿದ ಈ ನಾಡು ಭಾರತಾಂಬೆಯ ಮಡಿಲಾಯಿತು ನೋಡಿ ಅವಳ ಬಂಧನದ ಪರ್ವ ಮೊದಲಾಯಿತು
ಭೂಮಿ ವಸುಂಧರೆಯಾದಳು ನೋಡಿ
ಅವಳ ಬಂಗಾರದೊಡಲ ಬಗೆದು,
ಬರಿದು ಮಾಡಲಾಯಿತು
ಜನನಿ ಜನ್ಮ ಭೂಮಿ
ಸ್ವರ್ಗ ಸಮಾನವೆಂದರು ನೋಡಿ
ಗಡಿಯ ಗೆರೆಯೆಳೆದು ವೈಷಮ್ಯದ
ಬೆಂಕಿ ಹಚ್ಚಲಾಯಿತು
ಕಾಡು ಗಿಡಗಂಟೆಗಳ ನಡುವೆ
ಕೋಗಿಲೆಯ ಉಲಿ ಪಲ್ಲವಿಸುವುದನು
ವನದೇವತೆ ಎಂದರು ನೋಡಿ
ಹುಡುಕಿ ಹುಡುಕಿ ಬುಡಕ್ಕೆ ಕೊಡಲಿ ಹಾಕಿ
ಹಸಿರ ನೆತ್ತರ ಹರಿಸುವಂತಾಯಿತು
ಅದೆಲ್ಲೋ ಹಿಮರಾಶಿಯ ನೆತ್ತಿಯಲಿ
ಭೂಮ್ಯಾ0ತರಾಳದಲಿ ನರ್ತನಗೈಯುತ್ತಿದ್ದ
ಜಲರಾಶಿಗೆ ಗಂಗಾ ಮಾತೆ
ಪುಣ್ಯಪ್ರದಾತೆ ಎಂದರು ನೋಡಿ
ಶವವ ಎಸೆದೆಸೆದು ವಿಷವ ಬೆರಸಿ
ಪರಮ ಮಾಲಿನ್ಯಗೊಳಿಸಲಾಯಿತು
ಹೆಣ್ಣು ಕ್ಷಮಯಾಧರಿತ್ರಿ ಎಂದಾಗಲೇ
ಕಂಬನಿಯ ಕರಗಿಸಿ
ಎಗ್ಗಿಲ್ಲದ ನೋವ ಅವುಡುಗಚ್ಚಿ
ಬಚ್ಚಿಡುವಂತಾಯಿತು
ಇದೆಂತಹ ನಂಟು
ಹೆಣ್ಣಿಗೂ ನೋವಿಗೂ?
ಪುಣ್ಯದ ಎಳೆಎಳೆಗೂ
ಪ್ರೀತಿಯ ಕಣಕಣಕ್ಕೂ
ಅಭಿಮಾನದ ಹೊಳೆಹೊಳೆಗೂ
ಹೆಣ್ಣರೂಪ ನೀಡಿದರು ನೋಡಿ
ಅವಳಿಗೂ ನೋವಿಗೂ ಆಗಲೇ
ಅವಿನಾಭಾವ ನಂಟು ಸೃಷ್ಟಿಯಾಯಿತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ