ಗುಜರಾತ್ನ ನೂತನ 15 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಕರ್ನಾಟಕ ಮಾದರಿಯಲ್ಲೇ ಅಚ್ಚರಿ ಮೂಡಿಸಿದೆ.
ಭೂಪೇಂದ್ರ ಪಾಟೀಲ್ ನಾಳೆ ನೂತನ ಸಿಎಂ ಆಗಿ ಅಧಿಕಾರದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ವಿಜಯ್ ರುಪಾನಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಶಾಸಕಾಂಗ ಸಭೆ ಕರೆದ ಬಿಜೆಪಿ ನಾಯಕರು ಭೂಪೇಂದ್ರ ಪಟೇಲ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.
ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಜಯ್ ರೂಪಾನಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರ್ಧಾರ ಮಾಡಲಾಗಿತ್ತು.
ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸಹ ಭಾಗಿಯಾಗಿದ್ದರು. ಹೈಕಮಾಂಡ್ ಆದೇಶದಂತೆ ವಿಜಯ್ ರುಪಾನಿ ನಿನ್ನೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದರು.
ಕೇಂದ್ರ ನಾಯಕರು ಇಂದು ಗಾಂಧಿನಗರಕ್ಕೆ ಆಗಮಿಸಿ ಶಾಸಕಾಂಗ ಸಭೆ ನಡೆಸಿ ಭೂಪೇಂದ್ರ ಪಟೇಲ್ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಭೂಪೇಂದ್ರ ಪಟೇಲ್ ನಾಳೆಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ .
ಗುಜರಾತಿನ ಘಟ್ಲೋಡಿಯಾ ಕ್ಷೇತ್ರದಿಂದ 1.17 ಲಕ್ಷ ಮತಗಳಿಂದ ಶಾಸಕರಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಾಟೀಲ್ ಪ್ರಧಾನಿ ಮೋದಿಗೆ ಆಪ್ತರೂ ಹೌದು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment