ಕಳೆದ ವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಿಗ್ ಬಾಸ್ ಸ್ಪರ್ಧೆ ಚೈತ್ರ ಕೊಟ್ಟೂರ್ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ.
ಗಂಭೀರ ಸ್ಥಿತಿಯಲ್ಲಿರುವ ಚೈತ್ರ ಕೊಟ್ಟೂರ್ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬರಹಗಾರ್ತಿ ಚೈತ್ರ ಕೊಟೂರ್ ಗೆ ಕಳೆದ ವಾರ ಬೆಂಗಳೂರಿನ ಬ್ಯಾಡರಾಯನಪುರದ ಗಣಪತಿ ದೇವಸ್ಥಾನದಲ್ಲಿ ಮಂಡ್ಯದ ನಾಗಾರ್ಜುನ್ ಜೊತೆ ಮದುವೆ ಯಾಗಿದ್ದರು.
ಆದರೆ ತಾಳಿ ಕಟ್ಟಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಇವರ ದಾಂಪತ್ಯ ಜೀವನ ಬಿರುಕು ಬಿಟ್ಟಿತು. ಕೆಲವು ಕನ್ನಡಪರ ಸಂಘಟನೆಗಳು ಬೆದರಿಸಿ ನನ್ನನ್ನು ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ನಾಗಾರ್ಜುನ್ ಆರೋಪಿಸಿ ಪೋಲಿಸ್ ಠಾಣೆಯ ಮೆಟ್ಡಿಲೇರಿದ್ದರು.
ಈ ವಿಷಯದಲ್ಲಿ ಪೋಲಿಸರು ರಾಜಿ ಸಂಧಾನದ ಮೂಲಕ ಸಮಸ್ಯೆ ಪರಿಹಾರ ಮಾಡಿಕೊಳ್ಳೋಣವೆಂದು ಭರವಸೆ ನೀಡಿದ ನಾಗಾರ್ಜುನ್ ಕುಟುಂಬಸ್ಥರು ಮಂಡ್ಯಗೆ ತೆರಳಿದರು. ಇಲ್ಲಿಯ ತನಕ ಮಾತುಕತೆಗೆ ಬಂದಿಲ್ಲವೆಂದು ಚೈತ್ರ ಎರಡು ಬಾರಿ ಆತ್ಮಹತ್ಯೆಗೆ ಯತ್ನ ಮಾಡಿದ್ದರಂತೆ.
ಪೋಷಕರು ಚೈತ್ರಳಿಗೆ ಧೈರ್ಯ ಹೇಳಿ ಸಮಸ್ಯೆ ಪರಿಹಾರ ಮಾಡುತ್ತೇವೆಂದು ಭರವಸೆ ಕೊಟ್ಟಿದ್ದರು. ಆದರೆ ನಾಗಾರ್ಜುನ್ ಕುಟಂಬಸ್ಥರು ಮದುವೆಯಾದ ದಿನ ಹೋದವರು ಮತ್ತೆ ಬರಲೇ ಇಲ್ಲ. ಇದರಿಂದ ಮನನೊಂದು ಚೈತ್ರ ಕೊಟ್ಟೂರ್ ಇಂದು ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ವಿಷ ಸೇವಿಸಿದ್ದಾರೆ. ತೀವ್ರ ರೀತಿಯಲ್ಲಿ ಅಸ್ವಸ್ಥಗೊಂಡ ಚೈತ್ರಳನ್ನು ಕೋಲಾರದ ಇಟಿಸಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment