ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ: ಡಿ ಕೆ ಸುರೇಶ್ ನಾಮಪತ್ರ ಹಿಂದಕ್ಕೆ ?

Team Newsnap
1 Min Read
Notice from Election Commission to D.K. - Provide document for allegation ಚುನಾವಣಾ ಆಯೋಗದಿಂದ ಡಿ.ಕೆ.ಶಿಗೆ ನೋಟಿಸ್ - ಆರೋಪಕ್ಕೆ ದಾಖಲೆ ಕೊಡಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ಇದರಿಂದ ಡಿಕೆಶಿಗೆ ನೋ ಟೆನ್ಷನ್ .

ಡಿಕೆ ಶಿವಕುಮಾರ್ ಕಾಂಗ್ರೆಸ್‌ನಿಂದ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ಆದಾಯ ತೆರಿಗೆ ನೋಟಿಸ್ ಹಿನ್ನೆಲೆ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಭೀತಿಯಿತ್ತು. ಹೀಗಾಗಿ ಅವರ ಸಹೋದರ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.

ಈಗ ಡಿಕೆಶಿ ನಾಮಪತ್ರ ಸ್ವೀಕೃತವಾಗಿದೆ ದೊಡ್ಡ ತಲೆನೋವು ಕಳೆದಂತಾಗಿದೆ.

ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ ಸಂತೋಷ್ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಅಫಿಡವಿಟ್ ಸೇರಿ ಇನ್ನಿತರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಡಿಕೆಶಿ 4 ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳನ್ನೂ ಸ್ವೀಕೃತಗೊಳಿಸಲಾಗಿದೆ.

ಡಿಕೆಶಿಯ ನಾಮಪತ್ರ ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಯಾವಾಗ ಹಿಂದಕ್ಕೆ ಪಡೆಯುತ್ತಾರೆ ಎಂಬುದು ತಿಳಿದು ಬಂದಿಲ್ಲ.ಇದನ್ನು ಓದಿ –ಈಶ್ವರಪ್ಪಗೆ ಪ್ರಧಾನಿ ಮೋದಿಯಿಂದ ಪ್ರಶಂಸೆ

Share This Article
Leave a comment