ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ಬಚಾವ್ ಆಗಿದ್ದಾರೆ, ಕೇರಳದ ವೈಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದಾರೆ. ರಾಹುಲ್ ಕಿವಿ ಹಿಂಡಿದ ಸುಪ್ರೀಂ ನೀವು ಹೇಳಿಕೆಗಳನ್ನು ನೀಡುವಾಗ ಎಚ್ಚರಿದಿಂದ ಮಾತನಾಡಬೇಕು.
ಅಂದಿನ ನಿಮ್ಮ ಹೇಳಿಕೆ ಒಳ್ಳೆಯ ಉದ್ದೇಶದಿಂದ ಕೂಡಿರಲಿಲ್ಲ. ಇನ್ಮುಂದೆ ಜಾಗೃತೆ ವಹಿಸಿ. ನಿಮ್ಮನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡೋದ್ರಿಂದ ನಷ್ಟ ಆಗಲಿದೆ ಎಂದ ಸುಪ್ರೀಂ ಕೋರ್ಟ್, ಜೈಲು ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕೋರ್ಟ್ನ ಈ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಸಂಸದ ಸ್ಥಾನದಿಂದ ಮುಂದುವರಿಯಲಿದ್ದಾರೆ. ಅನರ್ಹತೆಯಿಂದ ಪಾರಾಗಿದ್ದಾರೆ. ರಾಹುಲ್ ಗಾಂಧಿ ಮತ್ತೆ ಲೋಕಸಭಾ ಚುನಾವಣೆಗೂ ಸ್ಪರ್ಧಿಸಬಹುದಾಗಿದೆ.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ, ಕರ್ನಾಟಕದ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದ್ದರು. ಎಲ್ಲಾ ಕಳ್ಳರ ಉಪನಾಮ ಮೋದಿ ಎಂದು ಹೇಗೆ ಬರುತ್ತದೆ ಅಂತಾ ಪ್ರಶ್ನೆ ಮಾಡಿದ್ದರು. ರಾಹುಲ್ ಗಾಂಧಿಯ ಈ ಹೇಳಿಕೆ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಾಗಿತ್ತು,
ಸೂರತ್ನ ಸಿಜೆಎಂ ಕೋರ್ಟ್, ರಾಹುಲ್ ಗಾಂಧಿಗೆ ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿ, ದಂಡ ಕೂಡ ವಿಧಿಸಿತ್ತು.
ಈ ತೀರ್ಪು ಬೆನ್ನಲ್ಲೇ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವೂ ರದ್ದಾಗಿತ್ತು. ಸಿಜೆಎಂ ಕೋರ್ಟ್ನ ತೀರ್ಪನ್ನು ರಾಹುಲ್ ಗಾಂಧಿ, ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.ಸ್ವಂತ ಕಾರು ಇದ್ದವರಿಗೆ BPL ಕಾರ್ಡ್ ರದ್ದು – ಸಚಿವ K.H ಮುನಿಯಪ್ಪ
ಕೋರ್ಟ್ ತೀರ್ಪನ್ನು ಪರಿಶೀಲಿಸಿ, ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಏಪ್ರಿಲ್ 25 ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್, ಜುಲೈ 7 ರಂದು ತೀರ್ಪು ಪ್ರಕಟಿಸಿತ್ತು. ರಾಹುಲ್ ಗಾಂಧಿಗೆ ಕೆಳ ನ್ಯಾಯಾಲಯವು ನೀಡಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More
ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
This website uses cookies.
Leave a Comment