ಸರ್ಕಾರದಿಂದ ಮಾಹಿತಿ ಕೇಳಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಸರ್ಕಾರಕ್ಕೆ 70 ಪುಟಗಳ ವರದಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರ್ಕಾರಕ್ಕೆ ಸಲ್ಲಿಸಿದ್ದಾರೆ.5 ಲಕ್ಷ ರು ಲಂಚ ಪಡೆಯುವ ಮುನ್ನ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಲೋಕಾಯುಕ್ತ ಬಲೆಗೆ
ಮುರುಘಾ ಮಠದಲ್ಲಿ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮಾಜದ ಮುಖಂಡರು ಹಾಗೂ ಭಕ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು.
ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಗೌಪ್ಯವಾಗಿ ಇಡಲಾಗಿದೆ. ಮಠಕ್ಕೆ ಆಡಳಿತಾಧಿಕಾರಿ ನೇಮಕ ಸನ್ನಿಹಿತವಾಗಿದೆ ಎಂದು ಹೇಳಲಾಗಿದೆ.
ಈ ನಡುವೆ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ, ಜಿಲ್ಲಾಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದೇವೆ. ಮುರುಘಾ ಶ್ರೀಗಳು ನಮಗೆ ಜಿಪಿಎ ನೀಡಿದ್ದಾರೆ. ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ವಸ್ತ್ರದಮಠ ಅವರಿಗೂ ಜಿಪಿಎ ನೀಡಲಾಗಿದೆ, ಮಠ ಮತ್ತು ವಿದ್ಯಾಪೀಠದ ಆಡಳಿತ ಸುಗಮವಾಗಿ ನಡೆಯುತ್ತಿದೆ. ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಅನಗತ್ಯವಾಗಿದೆ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು