crime

ಮೈಸೂರು ಉದ್ಯಮಿಯ ಕೊಲೆ ಕೇಸ್‍ಗೆ ಬಿಗ್ ಟ್ವಿಸ್ಟ್ – ತಂದೆಯನ್ನೇ ಕೊಂದ 16ರ ಮಗ!

ಮೈಸೂರಿನಲ್ಲಿ ಸೋಮವಾರ ಬೃಂದಾವನ ಬಡಾವಣೆಯಲ್ಲಿ ನಡೆದ ಅಗರ ಬತ್ತಿ ಉದ್ಯಮಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ತಂದೆಯನ್ನೇ ಬರ್ಬರವಾಗಿ 16ರ ಮಗನೇ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ

ಬೃಂದಾವನ ಬಡಾವಣೆಯ ನಿವಾಸಿ ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವ್ಯಾಪಾರಿ ಸಂಪತ್ ಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. 16 ವರ್ಷದ ಮಗನ ಮುಂದೆಯೇ ತಂದೆಯನ್ನು ಕೊಲೆ ಮಾಡಲಾಗಿದೆ ಹೇಳಲಾಗಿತ್ತು.ಇದನ್ನು ಓದಿ –ಚಾಮರಾಜನಗರದಲ್ಲಿ ಉಪನ್ಯಾಸಕಿ ಚಂದನಾ ಆತ್ಮಹತ್ಯೆ

ಕೊಲೆಯಾದ ಸಂಪತ್ ಅವರ 16 ವರ್ಷದ ಮಗ, ತನ್ನ ಮುಂದೆಯೇ ರಾಡ್‍ಗಳಿಂದ ತನ್ನ ತಂದೆಯನ್ನು ಅಪರಿಚಿತರು ಹತ್ಯೆ ಮಾಡಿ ಓಡಿ ಹೋದರು ಎಂದು ಪೊಲೀಸರಿಗೆ ಹೇಳಿದ್ದ.

ಈ ಕೊಲೆಗೆ ರಿಯಲ್ ಎಸ್ಟೇಟ್ ಉದ್ಯಮದ ವೈಷಮ್ಯ ಕಾರಣ ಇರಬಹುದು ಎಂದು ಮೇಲ್ನೋಟಕ್ಕೆ ಅನ್ನಿಸಿತ್ತು. ಆದರೆ ಕೊಲೆಯಾದ ವ್ಯಕ್ತಿಯ ಮಗ ಹೇಳಿಕೆಗಳಲ್ಲೂ ಅನುಮಾನಗಳು ಮೂಡಿದ್ದವು.

ಹೀಗಾಗಿ ಪೊಲೀಸರು ಕೊಲೆಯಾದ ವ್ಯಕ್ತಿಯ ಮಗನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹದಿಹರೆಯದ ಮಗನೇ ತನ್ನ ತಂದೆಯನ್ನು ಬರ್ಬರವಾಗಿ ಕೊಂದ ಸತ್ಯ ಹೊರ ಬಿದ್ದಿದೆ.

ಸಂಪತ್ ಕುಟುಂಬದಲ್ಲಿ ಬಹಳ ವೈಮನಸ್ಸು ಇತ್ತು. ಸಂಪತ್ ಪ್ರತಿ ನಿತ್ಯವೂ ತನ್ನ ಪತ್ನಿ – ಮಗನ ಜೊತೆ ಜಗಳವಾಡ್ತಿದ್ದ. ಇದರಿಂದ ಬೇಸತ್ತ ಮಗ, ತನ್ನ ತಾಯಿ ಮನೆಯಲ್ಲಿ ಇಲ್ಲದ ವೇಳೆ ಕಬ್ಬಿಣದ ರಾಡ್‍ನಿಂದ ತಂದೆಯನ್ನು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ನಂತರ ಈ ಕೊಲೆಯನ್ನು ಅಪರಿಚಿತರು ಮಾಡಿ ಹೋದರು ಎಂದು ಬಿಂಬಿಸುವ ನಾಟಕವಾಡಿದ್ದಾನೆ. ಮನೆಯಿಂದ ಓಡಿ ಹೊರಗಡೆ ಬಂದು ಅರಚಿಕೊಂಡು ಯಾರೋ ಕೊಲೆ ಮಾಡಿ ಓಡಿ ಹೋದರು ಎಂದು ಸನ್ನಿವೇಶ ಸೃಷ್ಟಿಸಿದ್ದಾನೆ. ತನ್ನ ತಾಯಿಗೂ ಇದೇ ಕಥೆ ಹೇಳಿದ ಮಗ, ಅದರ ಆಧಾರದ ಮೇಲೆ ದೂರು ನೀಡಲಾಗಿತ್ತು.

ಕೊಲೆ ನಡೆದ ವೇಳೆ, ಅಲ್ಲಿನ ಸನ್ನಿವೇಶ, ಸಿಸಿಟಿವಿ ದೃಶ್ಯಗಳು ಎಲ್ಲವನ್ನು ಗಮನಿಸಿದ ಪೋಲಿಸರು ಯಾರು ಮನೆಗೆ ಬರದೆ ಇರೋದು ಸ್ಪಷ್ಟವಾಗಿದೆ. ಆಗ, ಮಗನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾಗ ಮಗ ತಾನೇ ತನ್ನ ತಂದೆಯನ್ನು ಕೊಂದೆ ಎಂಬುದನ್ನು ಒಪ್ಪಿಕೊಂಡಿದ್ದಾನೆ.

Team Newsnap
Leave a Comment

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024