ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ನೀರಾವರಿ, ಲೋಕೋಪಯೋಗಿ ಇಲಾಖೆಯ ಕ್ಲಾಸ್ 1 ಕಂಟ್ರಾಕ್ಟರ್ ಗಳಾದ ಉಪ್ಪಾರ, ಅರವಿಂದ್, ಸೋಮಶೇಖರ್ ಮೇಲೆ ಈ ತಿಂಗಳ ಆರಂಭದಲ್ಲಿ ಐಟಿ ನಡೆಸಿದ್ದ ರೇಡ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಐಟಿ ರೇಡ್ ವೇಳೆ ಸಿಕ್ಕಿದ್ದ 750 ಕೋಟಿ ರೂಪಾಯಿ ಮೌಲ್ಯದ ಸಂಪತ್ತಿನಲ್ಲಿ 150 ಕೋಟಿಯಷ್ಟೇ ಸಕ್ರಮ. ಉಳಿದ 600 ಕೋಟಿ ಬೇನಾಮಿಯಾಗಿರುವುದು ಖಚಿತವಾಗಿದೆ.
ದಾಳಿ ವೇಳೆ ಪತ್ತೆಯಾಗಿದ್ದ 750 ಕೋಟಿ ಅಕ್ರಮ ಆಸ್ತಿ ಕುರಿತು ತನಿಖೆಯ ವೇಳೆ 30ಕ್ಕೂ ಹೆಚ್ಚು ಗುತ್ತಿಗೆದಾರರನ್ನು ಕರೆಸಿ ಐಟಿ ಇಲಾಖೆ ಮತ್ತೆ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ 600 ಕೋಟಿಗೆ ಲೆಕ್ಕ ತೋರಿಸುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. ಕೇವಲ 150 ಕೋಟಿಗೆ ದಾಖಲೆ ಒದಗಿಸುವಲ್ಲಿ ಗುತ್ತಿಗೆದಾರರು ಸಫಲರಾಗಿದ್ದಾರೆ.
ಶೀಘ್ರವೇ ಆಸ್ತಿ ಅಸೆಸ್ಮೆಂಟ್ ಟೀಂಗೆ ತನಿಖಾ ತಂಡದ ವರದಿ ಸಲ್ಲಿಕೆ ಮಾಡಿದ್ದು, ಮತ್ತೊಮ್ಮೆ ಗುತ್ತಿಗೆದಾರರನ್ನು ವಿಚಾರಣೆಗೆ ಒಳಪಡಿಸಲಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಈ 600 ಕೋಟಿ ಅಕ್ರಮ ಸಂಪತ್ತು ಯಾರದು ಅಂತ ತನಿಖೆ ಚುರುಕುಗೊಳಿಸಲು ಮುಂದಾಗಿದೆ.
ಈ ಮಧ್ಯೆ ಯಡಿಯೂರಪ್ಪ ಮಾತ್ರ ಉಮೇಶ್ ಮೇಲಿನ ಐಟಿ ರೇಡ್ಗೂ ನನಗೂ ಸಂಬಂಧ ಇಲ್ಲ ಅಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ