ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಧುಮಕಿದ್ದಾರೆ.
ಕೊರೊನಾ ಅತಂಕದ ನಡುವೆಯೂ ಮೂರು ರ್ಯಾಲಿಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ಭಾಷಣಕ್ಕೆ ವೇದಿಕೆ ಸಿದ್ಧವಾಗಿದೆ.
ಅತಿ ಹೆಚ್ಚು ಹಿಂದುಳಿದ ವರ್ಗದ ಮತಗಳಿರುವ ಸಸಾರಾಮ್ನಲ್ಲಿ ಮೋದಿ ಭಾಷಣ ಮಾಡಿ ಬಿಜೆಪಿ ಪರ ಮತ ಯಾಚಿಸಿದ್ದಾರೆ.
ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಿದ ನರೇಂದ್ರ ಮೋದಿ, ಬಿಹಾರ ಎಂದಿಗೂ ಕೆಚ್ಚೆದೆಯ ಹೋರಾಟಕ್ಕೆ ತುಂಬಾ ಫೇಮಸ್. ಬಿಹಾರದ ಯೋಧರು ಗಲ್ವಾನ್ ಕಣಿವೆಯಲ್ಲಿ ಚೀನಾ ಜತೆ ಹೋರಾಡಿ ಹುತಾತ್ಮರಾಗಿದ್ದಾರೆ. ಪುಲ್ಮಾಮಾ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದಾರೆ. ಆದರೂ ದೇಶ ಕಾಯುವ ಮೂಲಕ, ಭಾರತ ಮಾತೆಯನ್ನು ರಕ್ಷಿಸುವ ಕಾಯಕದಲ್ಲಿ ಯಶಸ್ವಿಯಾಗಿದ್ದಾರೆ. ದೇಶದ ಹಾಗೂ ಬಿಹಾರ ರಾಜ್ಯದ ಗೌರವ ಹೆಚ್ಚಿಸಿದ್ದಾರೆ ಎಂದು ಮೋದಿ ಹೇಳಿದರು.
ಕೇಂದ್ರ ಸರಕಾರ ಇತ್ತೀಚೆಗೆ ಕೃಷಿ ಕಾಯಿದೆ ಜಾರಿಗೆ ತಂದಿದೆ. ಇದರಿಂದ ದಲ್ಲಾಳಿಗಳನ್ನು, ಮಧ್ಯವರ್ತಿಗಳನ್ನು ತಪ್ಪಿಸುವುದು ಸಾಧ್ಯವಾಗಿದೆ. ಆದರೆ ಪ್ರತಿಪಕ್ಷಗಳು ಇವುಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಅವರು ಮಧ್ಯವರ್ತಿಗಳ ಪರವಾಗಿಯೇ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ ಎಂದು ಮೋದಿ ಕಿಡಿಕಾರಿದರು.
ಚುನಾವಣೆ ಪ್ರಚಾರ ಭಾಷಣ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ, ರಾಮ್ ವಿಲಾಸ್ ಪಾಸ್ವಾನ್ ಮತ್ತು ರಘುವಂಶ್ ಪ್ರಸಾದ್ ಅವರನ್ನು ಸ್ಮರಿಸಿದರು.
ಕೊರೊನಾ ಮಹಾಮಾರಿ ಇಡೀ ವಿಶ್ವ, ದೇಶದಲ್ಲಿ ಸಮಸ್ಯೆ ತಂದೊಡ್ಡಿದಾಗ, ಬಿಹಾರ ಅತ್ಯಂತ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣಕ್ಕೆ ಒತ್ತು ನೀಡಿತು. ಇದರಿಂದ ಕೊರೊನಾ ಮಹಾಮಾರಿ ಇಲ್ಲಿ ಸ್ವಲ್ಪ ತಗ್ಗಿದೆ. ಇದಕ್ಕೆ ಬಿಹಾರ ಸರಕಾರಕ್ಕೆ ಅಭಿನಂದನೆಗಳು ಎಂದು ನರೇಂದ್ರ ಮೋದಿ ಶ್ಲಾಘಿಸಿದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment