March 13, 2026

Newsnap Kannada

The World at your finger tips!

accident

ಹೊಳಲ್ಕೆರೆ ಬಳಿ ಬೈಕ್‍ಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ನಾಲ್ವರು ಸಾವು

Spread the love

ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರಂತ ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಜರುಗಿದೆ

ನಾಗರಾಜ್(43), ವೀರೇಶ್ (15), ಸಂತೋಷ (13), ಶೈಲಜ (40) ಮೃತರು.

ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ತಡರಾತ್ರಿ ಸ್ವಗ್ರಾಮ ಬಿದುರ್ಗಕ್ಕೆ ತೆರಳುತಿದ್ದರು.

ಈ ವೇಳೆ ಚಿತ್ರದುರ್ಗದಿಂದ ಬರುತ್ತಿದ್ದ ಖಾಸಗಿ ಬಸ್‍ವೊಂದು ಓವರ್ ಟೇಕ್ ಮಾಡಿ ಮುನ್ನುಗ್ಗುವಾಗ ಎದುರು ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಅವಘಡಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣದ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!