ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ತೋಕರೆನ್ಸಿಯನ್ನು ಕೇಂದ್ರ ಸರ್ಕಾರ ನಿಷೇಧ ಹೇರಲು
ಚಿಂತನೆ ಮಾಡಿದೆ.
ಚಳಿಗಾಲದ ಅಧಿವೇಶನದಲ್ಲಿ ಈ ನಿರ್ಧಾರ ಕ್ಕೆ ಸಂಬಂಧಿಸಿದಂತೆ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ 26 ವಿಧೇಯಕಗಳನ್ನು ಮಂಡಿಸಲಿದ್ದು, ಅದರಲ್ಲಿ ಕ್ಟಿಪ್ಟೋ ಕರೆನ್ಸಿ ಕೂಡ ಒಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು, ಇದರ ಬೆನ್ನಲ್ಲೇ ಭಾರತದಲ್ಲಿ ಕ್ರಿಪ್ತೋಕರೆನ್ಸಿ ಯನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಹೂಡಿಕೆದಾರರನ್ನು ತಪ್ಪುದಾರಿಗೆಳೆಯಲು, ಆಕರ್ಷಿಸಲು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ ನೀಡಲು ಇಂತಹ ಕರೆನ್ಸಿಗಳನ್ನು ಬಳಸಲಾಗುತ್ತಿದೆ ಎಂಬ ಕಳವಳದ ನಡುವೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಅಧಿಕೃತ ಡಿಜಿಟಲ್ ಕರೆನ್ಸಿ ಮಸೂದೆ – 2021 ರ ಕ್ರಿಪ್ಟೋಕರೆನ್ಸಿ ಮತ್ತು ನಿಯಂತ್ರಣದ ಪ್ರಕಾರ, ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ, ಆದಾಗ್ಯೂ, ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಇದು ಅನುಮತಿಸುತ್ತದೆ. ಬಿಲ್ ರಚನೆಗೆ ಚೌಕಟ್ಟನ್ನು ರಚಿಸುವ ಗುರಿ ಹೊಂದಿದೆ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ, ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗಳ ಬಳಕೆಯ ಮೇಲೆ ಯಾವುದೇ ನಿರ್ದಿಷ್ಟ ನಿಯಮಗಳು ಅಥವಾ ಯಾವುದೇ ನಿಷೇಧವಿಲ್ಲ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ಕ್ರಿಪ್ಟೋ ಕರೆನ್ಸಿಗಳ ಕುರಿತು ಸಭೆ ನಡೆಸಿದ್ದರು. ಸಮಸ್ಯೆಯನ್ನು ಎದುರಿಸಲು ಬಲವಾದ ನಿಯಂತ್ರಕ ಕ್ರಮಗಳನ್ನು ತೆಗೆದುಕೊಳ್ಳಬಹುದಾದ ಸೂಚನೆಗಳಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ