ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು.
ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಶೇ 69ರಷ್ಟು ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಲಾಗಿದೆ
ಲೋಕಾಯುಕ್ತ ಪೋಲಿಸರ ದಾಳಿ ವೇಳೆ 40 ಲಕ್ಷ ರು ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್ನ ಮದ್ಯ ಪತ್ತೆಯಾಗಿತ್ತು.ಶೇ 70 ರಷ್ಟು ಜನಪ್ರತಿನಿಧಿಗಳಿಗೆ ಆಸ್ತಿ ವಿವರ ಸಲ್ಲಿಸಲು ಆಸಕ್ತಿ ಇಲ್ಲ – ಲೋಕಾಯುಕ್ತ
ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು