ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ಪೋಸ್ಟ್ ಮೂಲಕ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಕೋಳಿಗಳು, ಹಿತ್ತಲಕೋಳಿಗಳು, ಹಕ್ಕಿಗಳು, ಕಾಡುಹಕ್ಕಿಗಳು, ವಲಸೆ ಹಕ್ಕಿಗಳು ಯಾವುದೇ ಹಕ್ಕಿಗಳಲ್ಲಿ ಅಸ್ವಾಭಾವಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಕೂಡಲೆ ಪಾಶುಪಾಲನ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.
ಅಧಿಕಾರಿಗಳು ತೀವ್ರ ನಿಗಾವಹಿಸಿ ಹಕ್ಕಿ ಜ್ವರ ಸಂಭವನೀಯತೆಯನ್ನು ಪರಿಗಣಿಸಿ ಸಂಬಂಧ ಪಟ್ಟ ಪ್ರಯೋಗಾಲಯಕ್ಕೆ ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಜೀವಂತ ಕೋಳಿ ಹಾಗೂ ಕೋಳಿ ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನ ವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment