Main News

ಬಿಟ್ ಕಾಯಿನ್ ಹಗರಣ : ಕಾಂಗ್ರೆಸ್ ನಾಯಕರೂ ಇದ್ದಾರೆ – ಸಿಎಂ

ಬಿಟ್ ಕಾಯಿನ್ ಹಗರಣ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಗರಂ ಆಗಿ ಈ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ

ಖರ್ಗೆ ಹೇಳಿಕೆಯನ್ನು ಮಾಧ್ಯಮಗಳು ಸಿಎಂ ಮುಂದೆ ಪ್ರಸ್ತಾಪಿಸಿದಾಗ ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಆದರೆ ನಾನು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದರು.

ಪ್ರಿಯಾಂಕ್ ಏನು ಹೇಳಿದ್ದಾರೆ?

ಸದ್ಯ ರಾಜ್ಯದಲ್ಲಿ ಬಿಟ್ ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್ ನಿಂದ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಹೇಳಿದ್ದಾರೆ.

ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ಇದೆಯಾ ಎನ್ನುವುದು ಮುಖ್ಯವಾಗಿದೆ.

ಈ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024