ಬಿಜೆಪಿಯವರಿಗೆ 15 ಸ್ಥಾನ ಬೇಕು ಅಷ್ಟು ಇಟ್ಟುಕೊಂಡು ಮಿಕ್ಕಿದ್ದು ನಮಗೆ ಬಿಟ್ಟಿದ್ದಾರೆ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಎಸ್ವೈ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಉಳಿದ ಸ್ಥಾನ ನಾವು ಗೆಲ್ಲುತ್ತೇವೆ ಬಿಡಿ ಎಂದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವರ್ಚೂವಲ್ ಮೂಲಕ ಸದಸ್ಯತ್ವ ನೋಂದಾವಣೆಗೆ ಚಾಲನೆ ನೀಡಿದ್ದೇವೆ. ಒಟ್ಟು ರಾಜ್ಯದ 2 ಸಾವಿರ ಸ್ಥಳಗಳಲ್ಲಿ ಸದಸ್ಯತ್ವ ನೋಂದಾವಣೆ ಏಕ ಕಾಲದಲ್ಲಿ ಆಗುತ್ತಿದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗುವ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಎರಡು ಪ್ಲಾನ್ ಹೊಂದಿದ್ದಾರೆ. ಒಂದು ಅಫೀಶಿಯಲ್ ಆಗಿ ಕಾಯ್ದೆ ಜಾರಿ ಮಾಡೋದು. ಎರಡನೇಯದ್ದು ಖಾಸಗಿ ಮಸೂದೆ ಮಂಡನೆ ಮಾಡೋಡು. ಈ ಎರಡು ಪ್ಲಾನ್ ಮಾಡಿಕೊಂಡಿರುವ ಬಿಜೆಪಿ ಈ ಬಿಲ್ಗಳನ್ನು ಮೂವ್ ಮಾಡಲು ಹೊರಟಿದೆ ಎಂದಿದ್ದಾರೆ
ಮತಾಂತರ ಕಾಯ್ದೆ ಪಾಸ್ ಮಾಡಿಕೊಳ್ಳಲು ಹೊರಟರೆ ಅದು ಪೊಲಿಟಿಕಲಿ ಎಫೆಕ್ಟ್ ಅಗುತ್ತದೆ. ಇದು ಕೇವಲ ರಾಜ್ಯಕ್ಕೆ ಮಾತ್ರ ಸಂಬಂಧಿಸಿದ ವಿಷಯವಲ್ಲ. ಇದು ಅಂತರಾಷ್ಟ್ರೀಯ ವಿಷಯವಾಗಿದೆ. ಇಡೀ ಪ್ರಪಂಚವೇ ರಾಜ್ಯದಲ್ಲಿ ಇಂತಹಾ ಕೆಲಸ ಆಗುತ್ತಿದೇಯೆ ಎಂದು ಪ್ರಶ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು