ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.
ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ರನ್ನು , ಸಿಂದಗಿ ಕ್ಷೇತ್ರದಿಂದ ರಮೇಶ್ ಭೂಸನೂರು ಅವರನ್ನು ಅಖಾಡಕ್ಕೆ ಇಳಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಬೈ-ಎಲೆಕ್ಷನ್ ಟಿಕೆಟ್ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ. ಅಚ್ಚರಿ ಎಂಬಂತೆ ಮಾಜಿ ಶಾಸಕ ಹಾಗೂ ಎಂಎಲ್ಸಿ ಶಿವರಾಜ್ ಸಜ್ಜನರ್ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಹಿಂದೆ ಶಿವರಾಜ್ರನ್ನು ದಿ. ಸಿಎಂ ಉದಾಸಿ ಬಿಜೆಪಿಗೆ ಕರೆದುಕೊಂಡು ಬಂದು ಸೂಕ್ತ ರಾಜಕೀಯ ಸ್ಥಾನಮಾನ ನೀಡಿದ್ದರು.
ಹೀಗಾಗಿ ಶಿವರಾಜ್ ಸಜ್ಜನರ್ ಉದಾಸಿ ಅವರ ಮಾನಸಪುತ್ರ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. 2004 ರಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 2013- 2018ರಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.
ಸಿಎಂ ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗಿತ್ತು. ಅದರಂತೆ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕೊನೆ ಘಳಿಗೆಯಲ್ಲಿ ಬಿಜೆಪಿ ಹೈಕಮಾಂಡ್, ಶಿವರಾಜ್ ಅವರಿಗೆ ಟಿಕೆಟ್ ನೀಡಿದೆ. ಅ.30 ರಂದು ಉಪಚುನಾವಣೆ ನಡೆಯಲಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ