February 21, 2026

Newsnap Kannada

The World at your finger tips!

kalamandir mysore

ಕಲಾಮಂದಿರವನ್ನು ಬಿಜೆಪಿಯವರು ಕಟ್ಟಿಸಿದ್ದ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಕ್ರೋಶ

Spread the love

ಬಿಜೆಪಿಯ ಜನಸೇವಕ್ ಸಮಾವೇಶಕ್ಕೆ ಕಲಾಮಂದಿರದಲ್ಲಿ ಅವಕಾಶ ನೀಡಿದ್ದು, ಕಲಾಮಂದಿರವನ್ನು ಬಿಜೆಪಿ ಕಟ್ಟಿಸಿದ್ದಾ? ಹೇಗೆ ಅಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನಿಸಿದರು.

ಭಾನುವಾರ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾಮಂದಿರ ಇರುವುದು ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ, ರಾಜಕೀಯ ಪಕ್ಷಗಳ‌ ಕಾರ್ಯಕ್ರಮಗಳಿಗಲ್ಲ. ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಮೇಲೆ ಕೇಸ್ ಹಾಕುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಕಲಾಮಂದಿರ ಮುಂದಿನ ದಿನಗಳಲ್ಲಿ ರಾಜಕೀಯ ಕಾರ್ಯಕ್ರಮಗಳ ವೇದಿಕೆಯಾಗಿ ಪರಿವರ್ತನೆಯಾಗುತ್ತೆ. ಬಿಜೆಪಿ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿರುವುದರಿಂದ ನಾಳೆ ಬೇರೆ ಪಕ್ಷಗಳ ಕಾರ್ಯಕ್ರಮಗಳಿಗೂ ಅವಕಾಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!