ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಆಕ್ರೋಷ

Team Newsnap
1 Min Read

ಬಿಟ್ ಕಾಯಿನ್ ಕೆಸರೆರಾಚಾಟದಲ್ಲಿ ತಮ್ಮ ಪುತ್ರ ರಾಕೇಶ್ ನನ್ನು ಎಳೆದು ತಂದ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ರಾಕೇಶ್ ಈಗ ಬದುಕಿಲ್ಲ, ಅದರ ಬಗ್ಗೆ ಮಾತನಾಡಲ್ಲ. ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದರು

ಬಿಜೆಪಿಯವರು ಸುಮ್ಮನೆ ಬಿಟ್ ಕಾಯಿನ್ ಬಗ್ಗೆ ಮಾತಾಡ್ತಿದ್ದಾರಾ..? ಯಾಕೆ ಎಲ್ಲರೂ ರಿಯಾಕ್ಟ್ ಮಾಡ್ತಿದ್ದಾರೆ. ಅಲ್ಲಿಗೆ ಏನೋ ಇದೆ ಅಂತ ಆಯ್ತಲ್ಲ. ಬೆಂಕಿ ಇಲ್ಲದೆ ಹೊಗೆಯಾಡುತ್ತಾ…?. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುತ್ತಿರುವುದು ಯಾಕೆ…?. ಸುಪ್ರಿಂ ಕೋರ್ಟ್ ಹಾಲಿ ನ್ಯಾಯ ಮೂರ್ತಿಗಳಿಂದ ನ್ಯಾಯಾಂಗ ತನಿಖೆ ಆಗಲಿ. ಎಲ್ಲವೂ ತನಿಖೆ ಆಗಲಿ 2013 ರಿಂದಲೂ ತನಿಖೆ ನಡೆಸಲಿ ಆದರೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

Share This Article
Leave a comment