ರಾಜ್ಯಕ್ಕೆ ಇಂದು ಬಿಜೆಪಿ ಉಸ್ತುವಾರಿ ಸಂಜೆ ಅರುಣ್ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದ ಸೃಷ್ಟಿಯಾಗಿರುವ ಬಂಡಾಯ, ಗೊಂದಲ, ವೈಮನಸ್ಸುಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ ಬೀಳಲಿದೆ.
ನಾಯಕತ್ವ ಬದಲಾವಣೆ, ಪರ-ವಿರೋಧ ಚಟುವಟಿಕೆಗಳಿಗೆ ತೆರೆಯಲು, ಭಿನ್ನಮತ ಸಾರಿರುವ ಮಂತ್ರಿ ಗಳು, ಶಾಸಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.
ಅರುಣ್ ಸಿಂಗ್ ಮೂರು ದಿನ ರಾಜ್ಯದಲ್ಲೇ ಮೊಕ್ಕಾಂ ಹೂಡಿ ಎಲ್ಲರೊಡನೆ ಸಮಾಲೋಚನೆ ನಡೆಸಿ ಬಿಜೆಪಿಯಲ್ಲಿನ ಬಿಕ್ಕಟ್ಟಿಗೆ ಪರಿಹಾರ ಸೂತ್ರ ರೂಪಿಸುವ ಕಸರತ್ತು ನಡೆಸಲಿದ್ದಾರೆ. ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿಪಡಿಸಿ ಬಿಕ್ಕಟ್ಟಿಗೆ ಪರಿಹಾರ ಸೂತ್ರವನ್ನು ಕಂಡುಕೊಳ್ಳಲು ಎಲ್ಲರ ಅಭಿಪ್ರಾಯ ಆಲಿಸಲಿದ್ದಾರೆ.
ಸಚಿವ ಯೋಗಿಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ 65 ಕ್ಕೂ ಹೆಚ್ಚು ಶಾಸಕರು ಅರುಣ್ ಸಿಂಗ್ ಅವರನ್ನು ಒತ್ತಾಯಿಸುವ ಸಾಧ್ಯತೆ ಇದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ