ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾ ದಳದ್ದು ಪ್ರಕೃತಿ ಸಹಜ ಸಂಬಂಧ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬಣ್ಣಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶೆಟ್ಟರ್, ಕುಮಾರಸ್ವಾಮಿ ಬಿಜೆಪಿ ಜತೆ ಇದ್ದಿದ್ದರೆ ಅಧಿಕಾರದಲ್ಲಿ. ಈಗ ಅವರು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವನ್ನು ನಂಬಿ ಮೋಸ ಹೋಗಿದ್ದಾಗಿ ಎಚ್ಡಿಕೆ ಹೇಳಿದ್ದು ಸರಿಯಾಗಿದೆ. ಆ ಪಕ್ಷವು ಗಾಂಧಿ ಕುಟುಂಬ ಬಿಟ್ಟು ಬೇರೆಯವರನ್ನು ಬೆಳೆಸಿಲ್ಲ ಎಂದು ಶೆಟ್ಟೆರ್ ಟೀಕಿಸಿದರು.
ಕಾಂಗ್ರೆಸ್ ಜತೆ ರಾಜಕೀಯ ಸಂಬಂಧ ಹೊಂದುವವರು ಮೊದಲಿಗೆ ಚೆನ್ನಾಗಿದ್ದರೂ ನಂತರ ಅವರಿಂದ ಮೋಸ ಹೋಗಿ ಹೊರ ಬರುತ್ತಾರೆ ಎಂದು ಜೆಡಿಎಸ್ ಪಕ್ಷದವರನ್ನು ಹೆಸರಿಸದೆ ಪ್ರಸ್ತಾಪಿಸಿದ ಸಚಿವರು, ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಯೇ ಇತರ ಪಕ್ಷಗಳು ಜನ್ಮತಳೆದಿವೆ ಎಂದು ವಿವರಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ವಿವರಣೆ ನೀಡಿದ ಶೆಟ್ಟರ್,
ಈ ವಿಷಯ ಪಕ್ಷದ ವರಿಷ್ಠರಿಗೆ ಸೇರಿದ್ದು, ಅವರು ಎಂದು ಹಸಿರುನಿಶಾನೆ ತೋರುವರೋ ಆಗ ಆಗಲಿದೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು