ದೆಹಲಿಯಲ್ಲಿ ಬಿಜೆಪಿ ನಾಯಕ ಚೌಧರಿ ಹತ್ಯೆಗೈದ ದುಷ್ಕರ್ಮಿಗಳು

Team Newsnap
1 Min Read

ಬಿಜೆಪಿ ನಾಯಕ ಜೀತು ಚೌಧರಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಕಳೆದ ರಾತ್ರಿ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಜರುಗಿದೆ.

ಬಿಜೆಪಿ ನಾಯಕನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ.

ರಾತ್ರಿ ಗಸ್ತಿನಲ್ಲಿದ್ದ ಪೋಲಿಸರು ದೆಹಲಿಯ ಮಯೂರ್ ವಿಹಾರ್-III, ಪಾಕೆಟ್ ಸಿ -1 ಬಳಿ ಜನರ ಸೇರಿರುವುದನ್ನು ಕಂಡು ಗುಂಪಿನಲ್ಲಿ ಒಬ್ಬ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ನೋಡಿದ್ದಾರೆ , ಪರಿಶೀಲನೆ ನಡೆಸಿದಾಗ ಅದು ಜಿತೇಂದರ್ ಅಕಾ ಜೀತು ಚೌಧರಿ ಎಂದು ತಿಳಿದುಬಂದಿದೆ.

ನಂತರ ಗುಂಡೇಟಿನಿಂದ ಒದ್ದಾಡುತ್ತಿದ್ದ ಅವರನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ ಪೊಲೀಸರು ಸ್ಥಳದಿಂದ ಕೆಲವು ಖಾಲಿ ಕಾಟ್ರಿಡ್ಜ್‍ಗಳು ಮತ್ತು ಇತರೆ ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ ಆರೋಪಿಗಳಿಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a comment