ಬಿಜೆಪಿ ಮುಖಂಡ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರು ಇನಾಮು – ಪ್ರತಿಭಾ

Team Newsnap
1 Min Read

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರು ಇನಾಮು ನೀಡುವುದಾಗಿ ಕಾಂಗ್ರೆಸ್ ನಾಯಕಿ, ಮಾಜಿ ಕಾರ್ಪೊರೇಟರ್ ಘೋಷಣೆ ಮಾಡಿದ್ದಾರೆ.

ಮಂಗಳೂರಿನ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ ನೀಡುತ್ತೇನೆ ಎಂದು ಬಿಲ್ಲವ ಸಮುದಾಯದ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಕೋಟಿ ಚೆನ್ನೈಯ್ಯರ ವಿರುದ್ಧ ಕೀಳಾಗಿ ಮಾತನಾಡಿದ್ದರು. ನಾಲ್ಕು ದಿನಗಳ ಒಳಗಾಗಿ ಜಗದೀಶ್ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುತ್ತೇವೆ. ಹೀಗೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ 1 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.

ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಗದೀಶ್ ಅಧಿಕಾರಿ, ಜನಾರ್ಧನ ಪೂಜಾರಿ ಹಾಗೂ ಕೋಟಿ ಚೆನ್ನೈಯ್ಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು.

Share This Article
Leave a comment