ಯಡಿಯೂರಪ್ಪ ರಾಜೀನಾಮೆ ಯಿಂದ ತೆರವುಗೊಂಡಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಇಂದೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಪಕ್ಷದ ಮುಖಂಡರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಾತ್ರಿಯ ಒಳಗೆ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.
ರಾಜ್ಯ ಬಿಜೆಪಿ ಕಚೇರಿಯಿಂದಲೇ ಶಾಸಕಾಂಗ ಸಭೆ ಬಗ್ಗೆ ಸೂಚನೆ ನೀಡಲಾಗಿದೆ. ಸಭೆಗೆ ಹಾಜರಾಗಲು ಬಿಜೆಪಿ ಶಾಸಕರಿಗೆ ತಿಳಿಸಲಾಗಿದೆ.
ಯಡಿಯೂರಪ್ಪ ಸೇರಿದಂತೆ 119 ಬಿಜೆಪಿ ಶಾಸಕರಿಗೂ ಸಂಜೆ 7 ಗಂಟೆಗೆ ಶಾಸಕಾಂಗ ಸಭೆಗೆ ಹಾಜರಾಗಲು ಮಾಹಿತಿ ನೀಡಲಾಗಿದೆ, ಉಸ್ತುವಾರಿ ಸಿಎಂ ಯಡಿಯೂರಪ್ಪ ನಡೆ ಬಗ್ಗೆಯೂ ಕುತೂಹಲ ಮೂಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ