Politics

ಬಿಜೆಪಿ MLC ಎಚ್. ವಿಶ್ವನಾಥ್ ಮತ್ತೆ ಕಾಂಗ್ರೆಸ್ ಸೇರುವ ಸುಳಿವು

ಮಗನಂತೆ ತಂದೆಯೂ ಕೂಡ ಮತ್ತೆ ಕಾಂಗ್ರೆಸ್ ಸೇರುವ ಮುನ್ಸೂಚನೆ ನೀಡಿ ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಮಾತನಾಡಿದ್ದಾರೆ. ನನ್ನ ಝಂಡಾ ಬದಲಾಗಬಹುದು ಆದರೆ ನನ್ನ ಅಜೆಂಡಾ ಬದಲಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಹುಣಸೂರಿನಲ್ಲಿ ಕೆಂಪೇಗೌಡ ಜಯಂತಿ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸ್ಥಳೀಯ ಶಾಸಕರೊಬ್ಬರ ಮನೆಯಲ್ಲಿ ಊಟ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಅದರಲ್ಲಿ ಯಾವ ವಿಶೇಷ ಏನೂ ಇಲ್ಲ. ನಾನು, ಡಿ.ಕೆ.ಶಿವಕುಮಾರ್ ಅವರು ಮೊದಲಿನಿಂದಲೂ ಕಾಂಗ್ರೆಸ್‍ನ ಕಾರ್ಯಕರ್ತರಾಗಿದ್ದೆವು. ಈ ಪಕ್ಷದಲ್ಲೇ ಇದ್ದು ಅನೇಕ ಜನಪರ ಕೆಲಸವನ್ನು ಮಾಡಿದ್ದೇವೆ ಎಂದರು.

ಫೋಕ್ಸೋ ಕಾಯ್ದೆಅಡಿ ಮುರುಘಾ ಶ್ರೀಗಳ ಬಂಧನ : ಅಜ್ಞಾತ ಸ್ಥಳದಲ್ಲಿ ವಿಚಾರಣೆ ಸಾಧ್ಯತೆ

ಮುಂದಿನ ನಡೆ ಕಾಂಗ್ರೆಸ್ ನತ್ತವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಗೊತ್ತು. ಸಂಜೆ ಮಳೆ ಬರಬಹುದು ವಾತಾವರಣವೂ ಬದಲಾಗಬಹುದು. ಒತ್ತಾಯ ಬಂದರೆ ಕಾಂಗ್ರೆಸ್‍ಗೂ ಹೋಗಬಹುದು. ಹೇಳಲಾಗುವುದಿಲ್ಲ. ಹೀಗೆ ಆಗಬೇಕು ಹಾಗೇ ಆಗಬೇಕು ಎಂಬ ನಿರ್ಣಯಗಳು ರಾಜಕಾರಣದಲ್ಲಿಲ್ಲ. ರಾಜಕಾರಣ ಈಗ ಯಾವ ರೀತಿಯಾಗಿದೆ ಎಂದು ನಾವು ಮತಕ್ಕಾಗಿ ಏನನ್ನು ಬೇಕಾದರು ಮಾಡಬಹುದು ಎಂದರು.

ಈ ದೇಶದ ಜನರು, ಬಡವರ ಪರ ಕಾರ್ಯಕ್ರಮವನ್ನು ಮಾಡುವುದಾಗಿದೆ. ಜಾತ್ಯಾತೀತ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಜೊತೆ ಕೆಲಸ ಮಾಡಬೇಕು. ಇದು ನನ್ನ ಅಜೆಂಡಾವಾಗಿದೆ. ಹೀಗಾಗಿ ನನ್ನ ಅಜೆಂಡಾವನ್ನು ಯಾವುದೋ ಒಂದು ಝಂಡಾದಲ್ಲಿ ಕುಳಿತುಕೊಂಡು ಕೆಲಸ ಮಾಡುವುದು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024