February 22, 2026

Newsnap Kannada

The World at your finger tips!

flag h

ಕೆಂಪುಕೋಟೆ ಮೇಲೆ ಸಿಖ್ ಧರ್ಮ ಧ್ವಜ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?

Spread the love

ನಿನ್ನೆ ದೆಹಲಿಯ ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಈ ಪ್ರಕರಣದ ನೇತೃತ್ವ ವಹಿಸಿದ್ದವನು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬಾತ ಎಂದು ತಿಳಿದು ಬಂದಿದೆ.

ಈತ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.
ದೀಪ್‌ ಸಿಧು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು.

ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು. ಸದ್ಯ ಈ ವಿಷಯ ತಿಳಿಯುತ್ತಿದ್ದಂತೆ ದೀಪ್‌ ಸಿಧು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜತೆ ಇರುವ ಫೋಟೋಗಳು ವೈರಲ್ ಆಗಿವೆ.

ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ, ದೀಪ್‌ ನಡವಳಿಕೆ ಗಮನಿಸಿದ್ದರು. ಹೀಗಾಗಿ ದೀಪ್‌ನನ್ನು ಧರಣಿಯಿಂದ ಹೊರಗಿಟ್ಟಿದ್ದರು. ಇನ್ನು ಓರ್ವ ರೈತ ನಾಯಕರು ದೀಪ್‌ನನ್ನು ರೈತ ಹೋರಾಟದ ಶತ್ರು ಎಂದು ಕರೆದಿದ್ದಾರೆ.
ಸದ್ಯ ಈಗ ರೈತ ಸಂಘಟನೆಗಳು ಈತನ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.

error: Content is protected !!