ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಬಂದಿರುವ ಟಿಕೆಟ್ನ್ನು ಯುವಕ ನಿರಾಕರಿಸಿ, ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದಾನೆ.
ಮಣಿಕುಟ್ಟನ್ಪಣಿಯಣ್ (31) ಎಂಬಿಎ ಪದವೀಧರನಿಗೆ ಬಿಜೆಪಿ ಕಡೆಯಿಂದ ಟಿಕೆಟ್ ನೀಡಿದರೂ ಸಹ ಯುವಕ ನಿರಾಕರಿಸಿದ್ದಾನೆ.
ಯುವಕ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾನೆ.
ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಸಮುದಾಯಕ್ಕೆ ಮೀಸಲಾಗಿದ್ದ ಮನಂತವಾಡಿ ಕ್ಷೇತ್ರದಿಂದ ಮಣಿಕುಟ್ಟನ್ಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಮಣಿಕುಟ್ಟನ್ ಕೇರಳದ ಪಣಿಯಾ ಬುಡಕಟ್ಟು ಸಮುದಾಯದಲ್ಲಿ ಎಂಬಿಎ ಪದವಿಗಳಿಸಿದ ಮೊದಲ ವ್ಯಕ್ತಿ ಎಂದು ಬಿಜೆಪಿ ಹೇಳಿತ್ತು. ಆದರೆ ಅಭ್ಯರ್ಥಿ ಪಟ್ಟಿಯಲ್ಲಿರುವ ಮಣಿಕುಟ್ಟನ್ ಟಿಕೆಟ್ ನಿರಾಕರಿಸಿದ್ದಾನೆ.
ಕೇಂದ್ರದ ನಾಯಕರು ನನ್ನನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಆದರೆ ನಾನು ಒಂದು ಉದ್ಯೋಗ ಪಡೆದು, ನನ್ನ ಕುಟುಂಬದೊಂದಿಗೆ ಇರಲು ಬಯಸುತ್ತೇನೆ. ಬಿಜೆಪಿ ನನಗೆ ನೀಡಿರುವ ಅವಕಾಶವನ್ನು ನಾನು ಸಂತೋಷದಿಂದ ನಿರಾಕರಿಸುತ್ತೇನೆ ಎಂದು ಮಣಿಕುಟ್ಟನ್ ಹೇಳಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ