ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ ಎಂದು ಮಾಜಿ ಸಿಎಂ
ಸಿದ್ದರಾಮಯ್ಯ ಮಂಡ್ಯದಲ್ಲಿ ಹೇಳಿದರು.
ಮೈಸೂರಿಗೆ ಹೋಗುವ ಮುನ್ನ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕತ೯ರ ಅದ್ದೂರಿ ಸ್ವಾಗತ ಸ್ವೀಕರಿಸಿ ಸುದ್ದಿಗಾರರ ಜೊತೆ ಮಾತನಾಡಿ, ಹಾನಗಲ್ ನಲ್ಲಿ ದಲಿತ ಎಡಗೈನವರ ಕಾರ್ಯಕ್ರಮದಲ್ಲಿ ನಾನು ಸಂವಿಧಾನ ಬದಲಾವಣೆ ಮಾಡ್ತೀನಿ ಅಂದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ ಎಂದೆ,
ಆದರೆ ಈ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದರು
ಸಿದ್ದರಾಮಯ್ಯ ಜಾತಿ ಮಾಡ್ತಿದ್ದಾರೆ ಅಂತಾರೆ. ಇತಿಹಾದ ಪುರುಷರ ಜಯಂತಿ ಆಚರಣೆ ಜಾರಿಗೆ ತಂದಿದ್ದೆ ನಾನು .ಇವರೇ ಗಿರಾಕಿಗಳು ಕೊಳಕರು ಅವರೇ ಜಾತಿ ಮಾಡೋದು.
ಜಾತಿ ಕೊಳಕರೆ ಜಾತಿ ಮಾಡೋದು.
ಆದ್ರೆ ನನ್ನ ಜಾತಿ ಮಾಡ್ತಾರೆ ಅನ್ನುತ್ತಾರೆ ಎಂದು ಟೀಕಿಸಿದರು
ನಾನು ಸಿ ಎಂ ಆದ್ನಲ್ಲ ಅನ್ನೋ ಹೊಟ್ಟೆ ಉರಿಯಿಂದ ಹಾಗೆ ಹೇಳ್ತಾರೆ.ಬಿಜೆಪಿಯವರಂತ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ ಇದನ್ನೇ ಕೆಟ್ಟದ್ದಾಗಿ ಹೇಳಿಕೊಂಡು ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ.
ಹೀಗಾಗಿ ನೀವು ಅವರ ಬಗ್ಗೆ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಿದರು
ನನ್ನ ಫ್ಲೆಕ್ಸ್ ಸುಟ್ಟಿದ ತಕ್ಷಣ ನಾನು ಸುಟ್ಟೋಗಲ್ಲ ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ.
ಎಲ್ಲರೂ ಸಮಾನವಾಗಿರಬೇಕು.
ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು.ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು.ಬಹಳ ಜನ ಬುದ್ಧಿ ಹೀನರು ಟೀಕೆ ಮಾಡ್ತಾರೆ. ಎಂದರು
ಸಿದ್ದರಾಮಯ್ಯ ಈ ಸಮಾಜಕ್ಕೆ ಏನು ಕೊಟ್ಟ ಅಂತಾರೆ.
ಒಂದು ಜಾತಿಯಲ್ಲಿ ಮಾತ್ರ ಬಡವ, ಶ್ರೀಮಂತ ಇಲ್ಲ.ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಹೀಗಾಗಿ ಎಲ್ಲಾ ಜಾತಿಯ ಬಡವರ ಅಭಿವೃದ್ಧಿ ಆಗಬೇಕು. ನಾನು ಕೊಟ್ಟ ಯೋಜನೆಗಳು ಒಂದು ಜಾತಿಗೆ ಸೀಮಿತವಾಗಿಲ್ಲ.
ಅವಕಾಶದಿಂದ ವಂಚಿತರಾದವರ ಪರ ನಾನು ಕೆಲಸ ಮಾಡಿದ್ದೇನೆ.
ಆದರೂ ಸಿದ್ದರಾಮಯ್ಯ ಜಾತಿ ಮಾಡ್ತಾನೆ ಅಂತಾರೆ ನೊಂದು ಹೇಳಿದರು,
ಎಲ್ಲಾ ಜಾತಿಗಳ ನಾಯಕರ
ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರತ, ಕೃಷ್ಣ, ಜೈನ ಜಯಂತಿ ಮಾಡಿದ್ದು ನಾನು.
ಆದರೂ ಸಿದ್ದರಾಮಯ್ಯನವರನ್ನು ಜಾತಿ ಜಾತಿ ಅಂತಾರೆ.
ಕೆಲವು ಜಾತಿ ಮಾಡುವ ಕೊಳಕು ಮನಸ್ಸಿನವರು ನನ್ನ ವಿರುದ್ಧ ಆರೋಪ ಮಾಡ್ತಾರೆ.
ಅರಸು ನಂತರ 5 ವರ್ಷ ಪೂರ್ಣಾವಧಿ ಆಡಳಿತ ಮಾಡಿದ್ದು ನಾನು.
ಹೀಗಾಗಿ ಅವರಿಗೆ ಹೊಟ್ಟೆ ಕಿಚ್ಚು.
ಹೊಟ್ಟೆ ಕಿಚ್ಚಿಗಾಗಿ ಈ ರೀತಿ ಆರೋಪ ಮಾಡ್ತಾರೆ.
ಕುರುಬರ ಸಂಘದ ಕಾರ್ಯಕ್ರಮದಲ್ಲಿ ಇತರೆ ಜಾತಿಯವರು ನನ್ನ ಜೊತೆ ಇದ್ದಾರೆ.
ಒಕ್ಕಲಿಗರು ಬಹಳಷ್ಟು ಜನ ನನ್ನ ಜೊತೆ ಬಂದಿದ್ದಾರೆ.
ಆದರೂ ಕೆಲವರು ನನ್ನ ಒಕ್ಕಲಿಗರ ವಿರೋಧಿ ಅಂತಾರೆ ಯಾಕೆ ಎಂದು ಪ್ರಶ್ನೆ ಮಾಡಿದರು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment