February 19, 2026

Newsnap Kannada

The World at your finger tips!

cm car

ಮಳವಳ್ಳಿಯಲ್ಲಿ ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನ

Spread the love

ಪಟ್ಟಣದ ಅನಂತ ರಾಂ ವೃತ್ತದಲ್ಲಿ ಗುರುವಾರ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ದೇವಿ, ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ.

ಕಪ್ಪು ಬಾವುಟ ಪ್ರದರ್ಶನ ಮಾಡದಂತೆ
ಪೋಲೀಸರು‌ ಎಷ್ಟೇ ಮನ ಒಲಿಸಿದರೂ ಪ್ರತಿಭಟನಾಕಾರರು ಮಾತ್ರ ಹಠ ಹಿಡಿದು ಪ್ರತಿಭಟನೆ ಮಾಡಿದರು. ಈ ಪ್ರತಿಭಟನೆ ನಡುವೆಯೂ ಸಿ ಎಂ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು.

error: Content is protected !!