ಪತ್ರಕರ್ತರು ಎಂದು ಹೇಳಿಕೊಂಡು ವೈದ್ಯರೊಬ್ಬರನ್ನು ಬ್ಲಾಕ್ಮೇಲ್ ಮಾಡಿ ಹಣ ಕೊಡುವಂತೆ ಒತ್ತಾಯಿಸಿರುವ ಮೂವರು ಯುವತಿ ರನ್ನು ಮೈಸೂರಿನ ಮಂಡಿ ಪೊಲೀಸರು ಬಂಧಿಸಿದ್ದಾರೆ .
ಅಮ್ರಿನ್ ಸಾನಿಯಾ, ಸಾಹಿದ್ ಆಶಿಯಾ ಬಾಯಿ ಎಂಬವರು ಪತ್ರಕರ್ತರು ಎಂದು ಹೇಳಿಕೊಂಡು ಬ್ಲಾಕ್ಮೇಲ್ ಮಾಡಿದವರು ಎಂದು ಹೇಳಲಾಗಿದೆ.
ಕೆ.ಆರ್.ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ರಾಜೇಶ್ ಎಂಬವರನ್ನು ನೀವು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಹಣ ಪಡೆಯುತ್ತಿದ್ದೀರಾ. ಈ ಬಗ್ಗೆ ನಮ್ಮ ಬಳಿ ದೂರು ಪತ್ರಗಳು ಮತ್ತು ಸಂಬಂಧಿಸಿದ ವಿಡಿಯೋ ಕ್ಲಿಪ್ಗಳು ಇದೆ, ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತೇವೆ. ನಿಮ್ಮ ಹೆಸರು ಹಾಳಾಗುತ್ತದೆ ಎಂದು ಬ್ಲಾಕ್ಮೇಲ್ ಮಾಡಿದ್ದಾರೆ.
ಇವೆಲ್ಲವನ್ನೂ ತಡೆಯಬೇಕಾದರೆ 5 ಲಕ್ಷ ರು ನೀಡುವಂತೆ ಬೇಡಿಕೆ ಇಟ್ಟಿದ್ದಲ್ಲದೆ, ಆನಂತರ 2 ಲಕ್ಷ ರೂ. ನೀಡುವಂತೆ ಕೇಳಿದ್ದಾರೆ. ಅಂತಿಮವಾಗಿ 50 ಸಾವಿರ ರೂ. ಅನ್ನು ನೀಡಲು ಒಪ್ಪಿದ್ದಾರೆ.
ಜ.18ರಂದು ವೈದ್ಯರು ಹಣ ನೀಡಲು ಸಂಜೀವಿನಿ ಆಸ್ಪತ್ರೆ ಬಳಿ ಬಂದಾಗ ಅವರ ಮೇಲೆ ಹತ್ತು ಜನರ ಗುಂಪೊಂದು ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ವೈದ್ಯರು ಅವರಿಂದ ತಪ್ಪಿಸಿಕೊಂಡು ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು