ಪತ್ರಕರ್ತರು ಎಂದು ಹೇಳಿಕೊಂಡು ವೈದ್ಯರೊಬ್ಬರನ್ನು ಬ್ಲಾಕ್ಮೇಲ್ ಮಾಡಿ ಹಣ ಕೊಡುವಂತೆ ಒತ್ತಾಯಿಸಿರುವ ಮೂವರು ಯುವತಿ ರನ್ನು ಮೈಸೂರಿನ ಮಂಡಿ ಪೊಲೀಸರು ಬಂಧಿಸಿದ್ದಾರೆ .
ಅಮ್ರಿನ್ ಸಾನಿಯಾ, ಸಾಹಿದ್ ಆಶಿಯಾ ಬಾಯಿ ಎಂಬವರು ಪತ್ರಕರ್ತರು ಎಂದು ಹೇಳಿಕೊಂಡು ಬ್ಲಾಕ್ಮೇಲ್ ಮಾಡಿದವರು ಎಂದು ಹೇಳಲಾಗಿದೆ.
ಕೆ.ಆರ್.ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ರಾಜೇಶ್ ಎಂಬವರನ್ನು ನೀವು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಹಣ ಪಡೆಯುತ್ತಿದ್ದೀರಾ. ಈ ಬಗ್ಗೆ ನಮ್ಮ ಬಳಿ ದೂರು ಪತ್ರಗಳು ಮತ್ತು ಸಂಬಂಧಿಸಿದ ವಿಡಿಯೋ ಕ್ಲಿಪ್ಗಳು ಇದೆ, ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತೇವೆ. ನಿಮ್ಮ ಹೆಸರು ಹಾಳಾಗುತ್ತದೆ ಎಂದು ಬ್ಲಾಕ್ಮೇಲ್ ಮಾಡಿದ್ದಾರೆ.
ಇವೆಲ್ಲವನ್ನೂ ತಡೆಯಬೇಕಾದರೆ 5 ಲಕ್ಷ ರು ನೀಡುವಂತೆ ಬೇಡಿಕೆ ಇಟ್ಟಿದ್ದಲ್ಲದೆ, ಆನಂತರ 2 ಲಕ್ಷ ರೂ. ನೀಡುವಂತೆ ಕೇಳಿದ್ದಾರೆ. ಅಂತಿಮವಾಗಿ 50 ಸಾವಿರ ರೂ. ಅನ್ನು ನೀಡಲು ಒಪ್ಪಿದ್ದಾರೆ.
ಜ.18ರಂದು ವೈದ್ಯರು ಹಣ ನೀಡಲು ಸಂಜೀವಿನಿ ಆಸ್ಪತ್ರೆ ಬಳಿ ಬಂದಾಗ ಅವರ ಮೇಲೆ ಹತ್ತು ಜನರ ಗುಂಪೊಂದು ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ವೈದ್ಯರು ಅವರಿಂದ ತಪ್ಪಿಸಿಕೊಂಡು ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment